ಉಡುಪಿ: ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ಯಕ್ಷಗಾನ ಕಲಾವಿದರಾಗಿ ಕಲಾಸೇವೆ ಮಾಡಿದ್ದ ಯುವ ಕಲಾವಿದ ಹೆರಂಜಾಲು ರಾಜೇಂದ್ರ ಗಾಣಿಗ (41) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು.
ಮಾರಣಕಟ್ಟೆ, ಹಾಲಾಡಿ, ಸೌಕೂರು, ನೀಲಾವರ ಹಾಗೂ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಪ್ರದರ್ಶನ ನೀಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ಅವರಿಗೆ ತಾಯಿ ಇದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.