ಉಡುಪಿ: ಬಡಗುತಿಟ್ಟು ಕಲಾವಿದ ಸತೀಶ ಹೆಗಡೆ (56) ಅವರು ಬುಧವಾರ ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.
ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪ ಹುಂಚದವರಾದ ಸತೀಶ ಹೆಗಡೆ ಅವರು ನಾಗರಕೋಡಿಗೆ, ಕಮಲಶಿಲೆ, ಸಿಗಂಧೂರು, ಹಾಲಾಡಿ, ಗುತ್ಯಮ್ಮ, ಸೀತೂರು ಮೇಳಗಳಲ್ಲಿ ಮೂರುವರೆ ದಶಕಗಳ ಕಲಾ ಸೇವೆ ಸಲ್ಲಿಸಿದ್ದಾರೆ.
ಸತೀಶ ಹೆಗಡೆ ಅವರು ಕೌರವ, ರಾವಣ ಮಹಿಷಾಸುರ ಮೊದಲಾದ ಖಳ ಪಾತ್ರಗಳನ್ನು ಮನೋಜ್ಞವಾಗಿ ಮಾಡುತ್ತಿದ್ದರು.