ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷದ ‘ಶ್ರೀ ವಿಶ್ವೇಶತೀರ್ಥ ಪ್ರಶಸ್ತಿಯನ್ನು ಮುಂಬೈನ ಪದವೀಧರ ಯಕ್ಷಗಾನ ಸಮಿತಿಗೆ ನೀಡಲಾಗುವುದು. ಪ್ರಶಸ್ತಿಯು ₹ 50,000 ನಗದು ಪುರಸ್ಕಾರ ಒಳಗೊಂಡಿದೆ. ಇದರ ಜತೆಗೆ 17 ಗಣ್ಯರ ಸ್ಮರಣಾರ್ಥ ನೀಡಲಾಗುವ ಪ್ರಶಸ್ತಿ ₹ 20,000 ನಗದು ಪುರಸ್ಕಾರ ಒಳಗೊಂಡಿದೆ. ಸಂಸ್ಥೆಯ ಕಾರ್ಯಕರ್ತರಿಗೆ ನೀಡುವ ಯಕ್ಷಚೇತನ ಪ್ರಶಸ್ತಿಯನ್ನು ರಮೇಶ್ ರಾವ್ ಕೋಟ ಅವರಿಗೆ ನೀಡಲಾಗುವುದು ಎಂದರು.