ರವಿಶಂಕರ ವಳಕ್ಕುಂಜ ಸನ್ಮಾನಿತರ ಪರವಾಗಿ ಕೃತಜ್ಞತೆ ನುಡಿಗಳನ್ನಾಡಿದರು. ಡಾ. ಶ್ರುತಕೀರ್ತಿ ರಾಜ್ ಅಭಿನಂದನ ನುಡಿಗಳನ್ನಾಡಿದರು. ಎಂಜಿನಿಯರ್ ಪಿ.ದಿನೇಶ್ ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಯಕ್ಷಗಾನ ಕಲಾರಂಗದ ನಾರಾಯಣ ಎಂ.ಹೆಗಡೆ, ವಿದ್ಯಾಪ್ರಸಾದ್, ಅಜಿತ್ ಕುಮಾರ್, ಅನಂತರಾಜ ಉಪಾಧ್ಯ, ಗಣೇಶ್ ಬ್ರಹ್ಮಾವರ, ಆನಂದ ಶೆಟ್ಟಿ ಉಪಸ್ಥಿತರಿದ್ದರು.