<p><strong>ಉಡುಪಿ:</strong> ‘ಯಕ್ಷಗಾನ ಜನರಿಗೆ ಮನೋರಂಜನೆ ನೀಡುವುದರ ಜತೆಗೆ ಮುಖ್ಯವಾಗಿ ಎಲ್ಲರನ್ನೂ ಒಗ್ಗೂಡಿಸುತ್ತದೆ ಎಂದು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಹೇಳಿದರು.</p>.<p>ಅಂಬಲಪಾಡಿಯಲ್ಲಿ ಸೋಮವಾರ ನಡೆದ ಯಕ್ಷಗಾನ ಕಲಾವಿದರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಯಕ್ಷಗಾನದ ಅಭ್ಯುದಯಕ್ಕೆ ಕಲಾವಿದರು ಮುಖ್ಯ, ಹಾಗೆಯೇ ಸಂಘಟಕರೂ ಮುಖ್ಯ. ಯಕ್ಷಗಾನ ಸಂಘಟನೆ ಮಾಡುತ್ತಿರುವ ಸಹೃದಯರಿಗೆ ಅಭಿನಂದನೆ ಸಲ್ಲಬೇಕು ಎಂದರು.</p>.<p>ಕಟೀಲು ಮೇಳದ ಹಿರಿಯ ಮದ್ದಲೆಗಾರ ಚಿಪ್ಪಾರು ಮರಿಯಯ್ಯ ಬಲ್ಲಾಳ, ಹಿರಿಯ ಹಾಸ್ಯಗಾರ ರವಿಶಂಕರ ವಳಕ್ಕುಂಜ, ಪ್ರತಿಭಾಶಾಲಿ ಪುಂಡುವೇಷಧಾರಿ ವೆಂಕಟೇಶ ಕಲ್ಲುಗುಂಡಿ ಮತ್ತು ನೇಪಥ್ಯ ಕಲಾವಿದರಾದ ಕುಪ್ಪೆಪದವು ಸುರೇಶ ಅವರನ್ನು ಸನ್ಮಾನಿಸಿ ‘ಪವಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.</p>.<p>ರವಿಶಂಕರ ವಳಕ್ಕುಂಜ ಸನ್ಮಾನಿತರ ಪರವಾಗಿ ಕೃತಜ್ಞತೆ ನುಡಿಗಳನ್ನಾಡಿದರು. ಡಾ. ಶ್ರುತಕೀರ್ತಿ ರಾಜ್ ಅಭಿನಂದನ ನುಡಿಗಳನ್ನಾಡಿದರು. ಎಂಜಿನಿಯರ್ ಪಿ.ದಿನೇಶ್ ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಯಕ್ಷಗಾನ ಕಲಾರಂಗದ ನಾರಾಯಣ ಎಂ.ಹೆಗಡೆ, ವಿದ್ಯಾಪ್ರಸಾದ್, ಅಜಿತ್ ಕುಮಾರ್, ಅನಂತರಾಜ ಉಪಾಧ್ಯ, ಗಣೇಶ್ ಬ್ರಹ್ಮಾವರ, ಆನಂದ ಶೆಟ್ಟಿ ಉಪಸ್ಥಿತರಿದ್ದರು.</p>.<p>ಪರಶುರಾಮ ಶೆಟ್ಟಿ ಮತ್ತು ವಿಜಯಾ ಪಿ.ಶೆಟ್ಟಿ ದಂಪತಿಯನ್ನು ಮರುಳಿ ಕಡೆಕಾರ್ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ‘ಯಕ್ಷಗಾನ ಜನರಿಗೆ ಮನೋರಂಜನೆ ನೀಡುವುದರ ಜತೆಗೆ ಮುಖ್ಯವಾಗಿ ಎಲ್ಲರನ್ನೂ ಒಗ್ಗೂಡಿಸುತ್ತದೆ ಎಂದು ಯಕ್ಷಗಾನ ಕಲಾರಂಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಹೇಳಿದರು.</p>.<p>ಅಂಬಲಪಾಡಿಯಲ್ಲಿ ಸೋಮವಾರ ನಡೆದ ಯಕ್ಷಗಾನ ಕಲಾವಿದರ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಯಕ್ಷಗಾನದ ಅಭ್ಯುದಯಕ್ಕೆ ಕಲಾವಿದರು ಮುಖ್ಯ, ಹಾಗೆಯೇ ಸಂಘಟಕರೂ ಮುಖ್ಯ. ಯಕ್ಷಗಾನ ಸಂಘಟನೆ ಮಾಡುತ್ತಿರುವ ಸಹೃದಯರಿಗೆ ಅಭಿನಂದನೆ ಸಲ್ಲಬೇಕು ಎಂದರು.</p>.<p>ಕಟೀಲು ಮೇಳದ ಹಿರಿಯ ಮದ್ದಲೆಗಾರ ಚಿಪ್ಪಾರು ಮರಿಯಯ್ಯ ಬಲ್ಲಾಳ, ಹಿರಿಯ ಹಾಸ್ಯಗಾರ ರವಿಶಂಕರ ವಳಕ್ಕುಂಜ, ಪ್ರತಿಭಾಶಾಲಿ ಪುಂಡುವೇಷಧಾರಿ ವೆಂಕಟೇಶ ಕಲ್ಲುಗುಂಡಿ ಮತ್ತು ನೇಪಥ್ಯ ಕಲಾವಿದರಾದ ಕುಪ್ಪೆಪದವು ಸುರೇಶ ಅವರನ್ನು ಸನ್ಮಾನಿಸಿ ‘ಪವಿ ಪ್ರಶಸ್ತಿ’ ನೀಡಿ ಗೌರವಿಸಲಾಯಿತು.</p>.<p>ರವಿಶಂಕರ ವಳಕ್ಕುಂಜ ಸನ್ಮಾನಿತರ ಪರವಾಗಿ ಕೃತಜ್ಞತೆ ನುಡಿಗಳನ್ನಾಡಿದರು. ಡಾ. ಶ್ರುತಕೀರ್ತಿ ರಾಜ್ ಅಭಿನಂದನ ನುಡಿಗಳನ್ನಾಡಿದರು. ಎಂಜಿನಿಯರ್ ಪಿ.ದಿನೇಶ್ ಪೂಜಾರಿ ಅವರನ್ನು ಅಭಿನಂದಿಸಲಾಯಿತು. ಯಕ್ಷಗಾನ ಕಲಾರಂಗದ ನಾರಾಯಣ ಎಂ.ಹೆಗಡೆ, ವಿದ್ಯಾಪ್ರಸಾದ್, ಅಜಿತ್ ಕುಮಾರ್, ಅನಂತರಾಜ ಉಪಾಧ್ಯ, ಗಣೇಶ್ ಬ್ರಹ್ಮಾವರ, ಆನಂದ ಶೆಟ್ಟಿ ಉಪಸ್ಥಿತರಿದ್ದರು.</p>.<p>ಪರಶುರಾಮ ಶೆಟ್ಟಿ ಮತ್ತು ವಿಜಯಾ ಪಿ.ಶೆಟ್ಟಿ ದಂಪತಿಯನ್ನು ಮರುಳಿ ಕಡೆಕಾರ್ ಗೌರವಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>