ಗುಂಡ್ಮಿ ಶಂಕರನಾರಾಯಣ ಉಪಾಧ್ಯ ಸಂಸ್ಮರಣೆಯ ಪ್ರಯುಕ್ತ ಬೆಲ್ತೂರು ರಮೇಶ ಅವರಿಗೆ ಆರ್ಥಿಕ ಸಹಾಯ ಹಸ್ತಾಂತರ ಮಾಡಲಾಯಿತು. ರಾಜ್ಯೋತ್ಸವ ಪುರಸ್ಕೃತರಾದ ಯಕ್ಷಗಾನ ವಿಮರ್ಶಕ, ಕಲಾಕೇಂದ್ರದ ಸಲಹಾ ಸಮಿತಿಯ ಸದಸ್ಯ ಡಾ.ಎಂ.ಪ್ರಭಾಕರ ಜೋಷಿ ಮತ್ತು ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಅವರನ್ನು ಸನ್ಮಾನಿಸಲಾಯಿತು. ಸಪ್ತೋತ್ಸವಕ್ಕೆ ಸಹಕಾರ ನೀಡಿದ ಯಕ್ಷಗಾನ ಕಲಾವಿದ ಕೊಂಡದಕುಳಿ ರಾಮಚಂದ್ರ ಹೆಗಡೆ ಅವರನ್ನು ಗೌರವಿಸಲಾಯಿತು.