<p><strong>ಬ್ರಹ್ಮಾವರ: </strong>ಉಪ್ಪಿನಕುದ್ರು ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ನ ಬೆಳ್ಳಿಹಬ್ಬದ ಸಂಭ್ರಮ ಹಾಗೂ ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ ಪ್ರಯುಕ್ತ ಮಟಪಾಡಿಯ ಚಪ್ಟೇಗಾರ್ ಸಭಾಭವನದಲ್ಲಿ ಚೂಡಾಮಣಿ ಲಂಕಾದಹನ ಯಕ್ಷಗಾನ ಗೊಂಬೆಯಾಟ ಪ್ರದರ್ಶನ ನಡೆಯಿತು.</p>.<p>ಯಕ್ಷಗಾನ ಪಾತ್ರಧಾರಿಯ ವೇಷ ತೊಟ್ಟ ಗೊಂಬೆಗಳನ್ನು ಸೂತ್ರದ ಮೂಲಕ ಸೊಗಸಾಗಿ ಕುಣಿಸಿದ ಸೂತ್ರಧಾರ ಗೊಂಬೆಯ ಕುಣಿತಕ್ಕೆ ತಕ್ಕ ವಿವರಗಳನ್ನು ನೀಡುತ್ತಾ ನೆರೆದಿದ್ದವರನ್ನು ರಂಚಿಸಿದರು.</p>.<p>ಗೊಂಬೆ ಕುಣಿತದ ಭಾಗವತರು, ಯಕ್ಷಗಾನ, ಚಂಡೆ, ಮದ್ದಳೆ, ತಾಳ, ಹಾರ್ಮೊನೀಯಂ ವಾದ್ಯ ಪ್ರದರ್ಶನದ ಕಳೆ ಹೆಚ್ಚಿಸಿದವು. ಗೊಂಬೆಗಳ ಭಾಗಗಳಿಗೆ ಸೂತ್ರ ಅಳವಡಿಸಿ ಅವೆಲ್ಲವನ್ನೂ ನಿಯಂತ್ರಿಸುತ್ತ ಸೂತ್ರಧಾರನೂ ಹೆಜ್ಜೆ ಹಾಕುವ ಮೂಲಕ ಪ್ರೇಕ್ಷಕರರನ್ನು ರಂಜಿಸಿದರು.</p>.<p>ಗೊಂಬೆಯಾಟ ಪ್ರದರ್ಶನದ ಬಳಿಕ ಮಟಪಾಡಿ ನಂದಿಕೇಶ್ವರ ಯಕ್ಷಗಾನ ಕಲಾ ಮಂಡಳಿ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯಿಂದ ಕುಂದಾಪುರದ ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಉಸ್ತುವಾರಿ ಭಾಸ್ಕರ್ ಕಾಮತ್ ಅವರಿಗೆ ಸನ್ಮಾನ ಮಾಡಲಾಯಿತು.</p>.<p>ಶ್ರೀ ನಂದಿಕೇಶ್ವರ ಯಕ್ಷಗಾನ ಕಲಾ ಮಂಡಳಿ ಗೌರವಾಧ್ಯಕ್ಷ ಚಂದ್ರಶೇಖರ ಕಲ್ಕೂರ, ಅಧ್ಯಕ್ಷರಾದ ಸ್ಯಾಮ್ಸನ್ ಸಿಕ್ವೇರಾ, ಸೊರ್ಪು ಸದಾನಂದ ಪಾಟೀಲ್, ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಲಾವಿದರ ಚೇತನ್ ಮಟಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶರೋನ್ ಸಿಕ್ವೇರಾ ಧನ್ಯವಾದ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ: </strong>ಉಪ್ಪಿನಕುದ್ರು ದೇವಣ್ಣ ಪದ್ಮನಾಭ ಕಾಮತ್ ಮೆಮೋರಿಯಲ್ ಯಕ್ಷಗಾನ ಗೊಂಬೆಯಾಟ ಟ್ರಸ್ಟ್ನ ಬೆಳ್ಳಿಹಬ್ಬದ ಸಂಭ್ರಮ ಹಾಗೂ ಸೂತ್ರ ಕ್ರೀಡೆಯ ಗಾರುಡಿಗ ಕೊಗ್ಗ ದೇವಣ್ಣ ಕಾಮತ್ ಜನ್ಮ ಶತಮಾನೋತ್ಸವ ಪ್ರಯುಕ್ತ ಮಟಪಾಡಿಯ ಚಪ್ಟೇಗಾರ್ ಸಭಾಭವನದಲ್ಲಿ ಚೂಡಾಮಣಿ ಲಂಕಾದಹನ ಯಕ್ಷಗಾನ ಗೊಂಬೆಯಾಟ ಪ್ರದರ್ಶನ ನಡೆಯಿತು.</p>.<p>ಯಕ್ಷಗಾನ ಪಾತ್ರಧಾರಿಯ ವೇಷ ತೊಟ್ಟ ಗೊಂಬೆಗಳನ್ನು ಸೂತ್ರದ ಮೂಲಕ ಸೊಗಸಾಗಿ ಕುಣಿಸಿದ ಸೂತ್ರಧಾರ ಗೊಂಬೆಯ ಕುಣಿತಕ್ಕೆ ತಕ್ಕ ವಿವರಗಳನ್ನು ನೀಡುತ್ತಾ ನೆರೆದಿದ್ದವರನ್ನು ರಂಚಿಸಿದರು.</p>.<p>ಗೊಂಬೆ ಕುಣಿತದ ಭಾಗವತರು, ಯಕ್ಷಗಾನ, ಚಂಡೆ, ಮದ್ದಳೆ, ತಾಳ, ಹಾರ್ಮೊನೀಯಂ ವಾದ್ಯ ಪ್ರದರ್ಶನದ ಕಳೆ ಹೆಚ್ಚಿಸಿದವು. ಗೊಂಬೆಗಳ ಭಾಗಗಳಿಗೆ ಸೂತ್ರ ಅಳವಡಿಸಿ ಅವೆಲ್ಲವನ್ನೂ ನಿಯಂತ್ರಿಸುತ್ತ ಸೂತ್ರಧಾರನೂ ಹೆಜ್ಜೆ ಹಾಕುವ ಮೂಲಕ ಪ್ರೇಕ್ಷಕರರನ್ನು ರಂಜಿಸಿದರು.</p>.<p>ಗೊಂಬೆಯಾಟ ಪ್ರದರ್ಶನದ ಬಳಿಕ ಮಟಪಾಡಿ ನಂದಿಕೇಶ್ವರ ಯಕ್ಷಗಾನ ಕಲಾ ಮಂಡಳಿ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯಿಂದ ಕುಂದಾಪುರದ ಉಪ್ಪಿನಕುದ್ರು ಶ್ರೀ ಗಣೇಶ ಯಕ್ಷಗಾನ ಗೊಂಬೆಯಾಟ ಮಂಡಳಿಯ ಉಸ್ತುವಾರಿ ಭಾಸ್ಕರ್ ಕಾಮತ್ ಅವರಿಗೆ ಸನ್ಮಾನ ಮಾಡಲಾಯಿತು.</p>.<p>ಶ್ರೀ ನಂದಿಕೇಶ್ವರ ಯಕ್ಷಗಾನ ಕಲಾ ಮಂಡಳಿ ಗೌರವಾಧ್ಯಕ್ಷ ಚಂದ್ರಶೇಖರ ಕಲ್ಕೂರ, ಅಧ್ಯಕ್ಷರಾದ ಸ್ಯಾಮ್ಸನ್ ಸಿಕ್ವೇರಾ, ಸೊರ್ಪು ಸದಾನಂದ ಪಾಟೀಲ್, ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಲಾವಿದರ ಚೇತನ್ ಮಟಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶರೋನ್ ಸಿಕ್ವೇರಾ ಧನ್ಯವಾದ ಸಮರ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>