<p><strong>ಬ್ರಹ್ಮಾವರ:</strong> ‘ಯುವಜನರಿಗೆ ಯಕ್ಷಗಾನದಂತಹ ಕಲೆಯನ್ನು ಶೈಕ್ಷಣಿಕವಾಗಿ ಮತ್ತು ಪ್ರದರ್ಶನಮುಖವಾಗಿ ಒದಗಿಸಿದಾಗ ಸಂಸ್ಕಾರ ಸಂಸ್ಕೃತಿಯ ಸಾಕ್ಷಾತ್ಕಾರವಾಗುತ್ತದೆ’ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.</p>.<p>ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ ಕೋಟದ ಯಕ್ಷಸೌರಭ ಹಿರೇಮಹಾಲಿಂಗೇಶ್ವರ ಕಲಾರಂಗದ ಪ್ರಸ್ತುತಿಯಲ್ಲಿ 31ರವರೆಗೆ ನಡೆಯುವ ಹವ್ಯಾಸಿ ಯಕ್ಷಗಾನ ಸಪ್ತಾಹ ಸೌರಭ ಸಪ್ತಮಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್.ಕಾರಂತ ಶುಭ ಹಾರೈಸಿದರು. ಯಕ್ಷಸೌರಭ ಹಿರೇಮಹಾಲಿಂಗೇಶ್ವರ ಕಲಾರಂಗದ ಅಧ್ಯಕ್ಷ ಕೋಡಿ ರಾಘವೇಂದ್ರ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗುರು ಚಿತ್ರಪಾಡಿ ಕೃಷ್ಣಮೂರ್ತಿ ಉರಾಳ ಅವರು, ಕೀರ್ತಿಶೇಷ ಹಂದಾಡಿ ಬಾಲಕೃಷ್ಣನಾಯಕ್ ಅವರಿಗೆ ನುಡಿನಮನ ಸಲ್ಲಿಸಿದರು.</p>.<p>ಪತ್ರಕರ್ತ ರಾಜೇಶ ಗಾಣಿಗ ಅಚ್ಲಾಡಿ, ಏಕದಂತ ಎಂಟರ್ ಪ್ರೈಸಸ್ ಮಾಲಿಕ ಚಂದ್ರಶೇಖರ ಕಾರಂತ ಇದ್ದರು. ಯಕ್ಷಸೌರಭದ ಸ್ಥಾಪಕಾಧ್ಯಕ್ಷ ಹರೀಶ ಭಂಡಾರಿ ಗಿಳಿಯಾರು ಸ್ವಾಗತಿಸಿದರು. ರಾಜೇಶ ಕರ್ಕೇರ ಕೋಡಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀನಾಥ ಉರಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ‘ಯುವಜನರಿಗೆ ಯಕ್ಷಗಾನದಂತಹ ಕಲೆಯನ್ನು ಶೈಕ್ಷಣಿಕವಾಗಿ ಮತ್ತು ಪ್ರದರ್ಶನಮುಖವಾಗಿ ಒದಗಿಸಿದಾಗ ಸಂಸ್ಕಾರ ಸಂಸ್ಕೃತಿಯ ಸಾಕ್ಷಾತ್ಕಾರವಾಗುತ್ತದೆ’ ಎಂದು ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.</p>.<p>ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದಲ್ಲಿ ಕೋಟದ ಯಕ್ಷಸೌರಭ ಹಿರೇಮಹಾಲಿಂಗೇಶ್ವರ ಕಲಾರಂಗದ ಪ್ರಸ್ತುತಿಯಲ್ಲಿ 31ರವರೆಗೆ ನಡೆಯುವ ಹವ್ಯಾಸಿ ಯಕ್ಷಗಾನ ಸಪ್ತಾಹ ಸೌರಭ ಸಪ್ತಮಿಗೆ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಸಾಲಿಗ್ರಾಮ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಕೆ.ಎಸ್.ಕಾರಂತ ಶುಭ ಹಾರೈಸಿದರು. ಯಕ್ಷಸೌರಭ ಹಿರೇಮಹಾಲಿಂಗೇಶ್ವರ ಕಲಾರಂಗದ ಅಧ್ಯಕ್ಷ ಕೋಡಿ ರಾಘವೇಂದ್ರ ಕರ್ಕೇರ ಅಧ್ಯಕ್ಷತೆ ವಹಿಸಿದ್ದರು. ಯಕ್ಷಗುರು ಚಿತ್ರಪಾಡಿ ಕೃಷ್ಣಮೂರ್ತಿ ಉರಾಳ ಅವರು, ಕೀರ್ತಿಶೇಷ ಹಂದಾಡಿ ಬಾಲಕೃಷ್ಣನಾಯಕ್ ಅವರಿಗೆ ನುಡಿನಮನ ಸಲ್ಲಿಸಿದರು.</p>.<p>ಪತ್ರಕರ್ತ ರಾಜೇಶ ಗಾಣಿಗ ಅಚ್ಲಾಡಿ, ಏಕದಂತ ಎಂಟರ್ ಪ್ರೈಸಸ್ ಮಾಲಿಕ ಚಂದ್ರಶೇಖರ ಕಾರಂತ ಇದ್ದರು. ಯಕ್ಷಸೌರಭದ ಸ್ಥಾಪಕಾಧ್ಯಕ್ಷ ಹರೀಶ ಭಂಡಾರಿ ಗಿಳಿಯಾರು ಸ್ವಾಗತಿಸಿದರು. ರಾಜೇಶ ಕರ್ಕೇರ ಕೋಡಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ಶ್ರೀನಾಥ ಉರಾಳ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>