ಕುಂದಾಪುರ: ನನಗೆ ನನ್ನದೇ ಗುಜರಿ ಅಂಗಡಿಯಲ್ಲಿ ದೊರೆಯುತ್ತಿದ್ದ ವಾರ ಪತ್ರಿಕೆ, ಪಾಕ್ಷಿಕ ಹಾಗೂ ಪತ್ರಿಕೆಗಳಿಂದ ಓದುವ ಹವ್ಯಾಸ ಬೆಳೆಯಿತು ಹಾಗೂ ಕಲಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆಯಾಯಿತು. ಆಗ ಬಹುಮಾನ ಪಡೆಯಲು ಸಾಧ್ಯವಾಗದೆ ಇದ್ದರೂ ಈಗ ಬಹುಮಾನ ವಿತರಿಸಲು ಸಾಧ್ಯವಾಗಿರುವುದು ಅಂದು ಓದು ಬಿತ್ತಿದ ಕನಸುಗಳಿಂದಲೇ ಎಂದು ರಾಷ್ಟ್ರಪ್ರಶಸ್ತಿ ವಿಜೇತ ಚಲನ ಚಿತ್ರ ನಿರ್ಮಾಪಕ ಯಾಕೂಬ್ ಗುಲ್ವಾಡಿ ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಇಲ್ಲಿನ ಸಮುದಾಯ ಸಂಘಟನೆ ಹಮ್ಮಿಕೊಂಡಿದ್ದ ವಿಡಿಯೊ ಭಾಷಣ ಸ್ಪರ್ಧೆಯ ವಿಜೇತರಿಗೆ ಜೇಸಿ ಭವನದಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಕುಂದಾಪುರದ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ರಾಜು ಬೆಟ್ಟಿನ ಮನೆ, ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಶಾಂತಿ ಕ್ವಾಡ್ರೆಸ್, ಬುದ್ಧಿಸ್ಟ್ ಸೊಸೈಟಿ ಆಫ್ ಇಂಡಿಯಾದ ರಾಘವೇಂದ್ರ ಉಡುಪಿ, ಜೇಸಿಐ ಅಧ್ಯಕ್ಷೆ ನಾಗರತ್ನಾ ಹೇರ್ಳೆ ಇದ್ದರು.
ಸಮುದಾಯ ಕುಂದಾಪುರದ ಅಧ್ಯಕ್ಷ ಉದಯ ಗಾಂವ್ಕರ್ ಸ್ವಾಗತಿಸಿದರು. ಸಚಿನ್ ಅಂಕೋಲಾ ವಂದಿಸಿದರು. ರವೀಂದ್ರ ಕೋಡಿ ನಿರೂಪಿಸಿದರು.