<p><strong>ಉಡುಪಿ</strong>: ಹಿರಿಯರ ಹಾಗೂ ಋಷಿಮುನಿಗಳ ಸಾವಿರಾರು ವರ್ಷಗಳ ಸಂಶೋಧನೆಯಿಂದ ಯೋಗದ ಫಲ ದೊರಕಿದೆ. ಯೋಗಾಭ್ಯಾಸದಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ನಗರದ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ನಡೆದ ಆನ್ಲೈನ್ ಮೂಲಕ ಯೋಗ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>2015ರ ಜೂನ್ 21ರಿಂದ ಯೋಗದಿನವನ್ನು ಸಾಮಾಜಿಕ ಸಂದೇಶದೊಂದಿಗೆ ಆಚರಿಸುತ್ತಾ ಬರಲಾಗಿದ್ದು, ಕೋವಿಡ್ ಸಂದಿಗ್ಧತೆಯ ಪರಿಣಾಮ ಈ ವರ್ಷ ‘ಮನೆಯಲ್ಲಿರಿ ಯೋಗದೊಂದಿಗೆ ಇರಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಯೋಗದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಬೇಕು. ಆಯುಷ್ ಇಲಾಖೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಕೋವಿಡ್ ನಿಯಂತ್ರಣಕ್ಕೆ ಯೋಗದೊಂದಿಗೆ ಆಯುರ್ವೇದದ ಮಹತ್ವವನ್ನು ಜನರಿಗೆ ತಲುಪಿಸಬೇಕು ಎಂದರು.</p>.<p>ಯೋಗ ಕೇಂದ್ರ ನಡೆಸಲು ಆಯುಷ್ ಇಲಾಖೆಯಲ್ಲಿ ಕೊರತೆಗಳಿದ್ದರೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಸಂಸದೆ ಭರವಸೆ ನೀಡಿದರು.</p>.<p>ಜಿಲ್ಲಾ ಆಯುಷ್ ಅಧಿಕಾರಿ ಪ್ರಕಾಶ್ ನಾಯ್ಕ್ ಮಾತನಾಡಿ, ಕೊರೊನಾ ಜಾಗೃತಿಯೊಂದಿಗೆ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಯೋಗ ತರಬೇತಿ ನೀಡಲಾಗುತ್ತಿದೆ. ಮನೆಯಲ್ಲಿ ಐಸೋಲೇಷನ್ ಇದ್ದವರಿಗೂ ಆನ್ಲೈನ್ ಮೂಲಕ ಯೋಗಾಭ್ಯಾಸ ಮಾಡಿಸಲಾಗುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಎಸ್ಪಿಜಿಎಸ್ಎಸ್ನ ಜಿಲ್ಲಾ ಶಿಕ್ಷಣ ಪ್ರಮುಖ ಲಲಿತಾ ಕೆದ್ಲಾಯ, ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು. ಡಾ. ವೀಣಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಹಿರಿಯರ ಹಾಗೂ ಋಷಿಮುನಿಗಳ ಸಾವಿರಾರು ವರ್ಷಗಳ ಸಂಶೋಧನೆಯಿಂದ ಯೋಗದ ಫಲ ದೊರಕಿದೆ. ಯೋಗಾಭ್ಯಾಸದಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.</p>.<p>ನಗರದ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ ಹಾಗೂ ಪತಂಜಲಿ ಯೋಗ ಶಿಕ್ಷಣ ಸಂಸ್ಥೆ ಸಹಯೋಗದೊಂದಿಗೆ ನಡೆದ ಆನ್ಲೈನ್ ಮೂಲಕ ಯೋಗ ಶಿಕ್ಷಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>2015ರ ಜೂನ್ 21ರಿಂದ ಯೋಗದಿನವನ್ನು ಸಾಮಾಜಿಕ ಸಂದೇಶದೊಂದಿಗೆ ಆಚರಿಸುತ್ತಾ ಬರಲಾಗಿದ್ದು, ಕೋವಿಡ್ ಸಂದಿಗ್ಧತೆಯ ಪರಿಣಾಮ ಈ ವರ್ಷ ‘ಮನೆಯಲ್ಲಿರಿ ಯೋಗದೊಂದಿಗೆ ಇರಿ’ ಎಂಬ ಧ್ಯೇಯ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ. ಯೋಗದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಬೇಕು. ಆಯುಷ್ ಇಲಾಖೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಕೋವಿಡ್ ನಿಯಂತ್ರಣಕ್ಕೆ ಯೋಗದೊಂದಿಗೆ ಆಯುರ್ವೇದದ ಮಹತ್ವವನ್ನು ಜನರಿಗೆ ತಲುಪಿಸಬೇಕು ಎಂದರು.</p>.<p>ಯೋಗ ಕೇಂದ್ರ ನಡೆಸಲು ಆಯುಷ್ ಇಲಾಖೆಯಲ್ಲಿ ಕೊರತೆಗಳಿದ್ದರೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ಸಂಸದೆ ಭರವಸೆ ನೀಡಿದರು.</p>.<p>ಜಿಲ್ಲಾ ಆಯುಷ್ ಅಧಿಕಾರಿ ಪ್ರಕಾಶ್ ನಾಯ್ಕ್ ಮಾತನಾಡಿ, ಕೊರೊನಾ ಜಾಗೃತಿಯೊಂದಿಗೆ ಜನರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಯೋಗ ತರಬೇತಿ ನೀಡಲಾಗುತ್ತಿದೆ. ಮನೆಯಲ್ಲಿ ಐಸೋಲೇಷನ್ ಇದ್ದವರಿಗೂ ಆನ್ಲೈನ್ ಮೂಲಕ ಯೋಗಾಭ್ಯಾಸ ಮಾಡಿಸಲಾಗುತ್ತಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಎಸ್ಪಿಜಿಎಸ್ಎಸ್ನ ಜಿಲ್ಲಾ ಶಿಕ್ಷಣ ಪ್ರಮುಖ ಲಲಿತಾ ಕೆದ್ಲಾಯ, ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ಇದ್ದರು. ಡಾ. ವೀಣಾ ಕಾರಂತ್ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>