ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡುವ 18 ರಿಂದ 35 ವರ್ಷದೊಳಗಿನ ಯುವಕ ಯುವತಿಯರು ಸ್ಪರ್ಧೆಯಲ್ಲಿ ಭಾಗವಹಿಸಬಹುದು. ಪ್ರಜಾಪ್ರಭುತ್ವ ಮೌಲ್ಯಗಳ ಕಗ್ಗೊಲೆ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕೊರೊನಾ ತಡೆಯಲು ಸರ್ಕಾರದ ನಿರ್ಲಕ್ಷ್ಯ ಹಾಗೂ ಹಣದುಬ್ಬರ ತಡೆಯುವಲ್ಲಿ ಸರ್ಕಾರ ವಿಫಲ ಎಂಬ ನಾಲ್ಕು ವಿಷಯಗಳ ಕುರಿತು ಸ್ಪರ್ಧಿಗಳು ಮೂರು ನಿಮಿಷಗಳ ಭಾಷಣ ಮಾಡಬೇಕು. ತಿಳಿದಿರುವ ಭಾಷೆಯಲ್ಲಿ ಭಾಷಣ ಮಾಡಬಹುದು.