<p><strong>ಪಡುಬಿದ್ರಿ</strong>: ಐತಿಹಾಸಿಕ ಸ್ಥಳಗಳ ಅಧ್ಯಯನ ಮಾಡುವ ಉದ್ದೇಶದಿಂದ ಇಬ್ಬರು ಯುವಕರು ಕಾಲ್ನಡಿಗೆಯ ಮೂಲಕ ಕರ್ನಾಟಕದಿಂದ ಕಾಶ್ಮೀರಕ್ಕೆ ಹೊರಟಿದ್ದಾರೆ.</p>.<p>ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಪಜೀರ್ ಗ್ರಾಮದ ಮೆಹತಾಬ್(21) ಹಾಗೂ ಬಿಲಾಲ್(18) ಸೋಮವಾರ ಪಾದ<br />ಯಾತ್ರೆ ಆರಂಭಿಸಿದ್ದು, ಮಧ್ಯಾಹ್ನ ವೇಳೆ ಪಡುಬಿದ್ರಿ ತಲುಪಿದ್ದಾರೆ.</p>.<p>ಮೆಹತಾಬ್ ಪ್ರಥಮ ಪಿಯುಸಿವರೆಗೆ ಕಲಿತಿದ್ದು, ಸೂಪರ್ ಮಾರ್ಕೆಟ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಬಿಲಾಲ್ ಈ ಬಾರಿ ಎಸ್ಸೆಸ್ಸೆಲ್ಸಿ ಉತ್ತೀರ್ಣನಾಗಿದ್ದು, ಶಿಕ್ಷಣ ಮುಂದುವರಿಸುವ ಇಚ್ಛೆಯನ್ನು ಹೊಂದಿದ್ದಾನೆ. ಲಾಕ್ಡೌನ್ನಿಂದ ಕೆಲಸವಿಲ್ಲದೇ ಮನೆಯಲ್ಲಿದ್ದ ವೇಳೆ ಸಾಧನೆ ಮಾಡಬೇಕೆಂಬ ಕನಸು ಕಂಡಿದ್ದರು. ಇಬ್ಬರು ಜೊತೆಗೂಡಿ ಪಾದಯಾತ್ರೆ ಮಾಡುವ ಬಗ್ಗೆ 4 ತಿಂಗಳ ಹಿಂದೆ ಯೋಜನೆ ಹಾಕಿಕೊಂಡಿದ್ದರು.</p>.<p>ಅದರಂತೆ 2,500 ಕಿ.ಮೀ. ದೂರ ಸಾಗುವ 90 ದಿನಗಳ ಪಾದಯಾತ್ರೆಯನ್ನು ಆರಂಭಿಸಿದ್ದು, ಮಾರ್ಗದಲ್ಲಿನ ಮಸೀದಿ, ಚರ್ಚ್ ಹಾಗೂ ಮಂದಿರಗಳ ಬಗ್ಗೆ ಮಾಹಿತಿಯನ್ನು ಯೂಟ್ಯೂಬ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ ಎಂದು ಮೆಹತಾಬ್ ತಿಳಿಸಿದರು.</p>.<p>ದಿನವೊಂದಕ್ಕೆ 50ರಿಂದ 70 ಕಿ.ಮೀ. ಕ್ರಮಿಸುವ ಗುರಿ ಹೊಂದಲಾಗಿದೆ. ರಾತ್ರಿ ವೇಳೆ ಪೆಟ್ರೋಲ್ ಬಂಕ್ ಇಲ್ಲವೇ ಇತರೆಡೆ ಟೆಂಟ್ಹೌಸ್ ನಿರ್ಮಿಸಿ ವಿಶ್ರಾಂತಿ ಪಡೆಯುತ್ತೇವೆ. ಬೆಳಿಗ್ಗೆ ಎದ್ದು ಯಾತ್ರೆ ಮುಂದುವರೆಸಲಾಗುವುದು ಎಂದರು.</p>.<p>ದಿನವೊಂದಕ್ಕೆ ₹350 ರಂತೆ ಸುಮಾರು ₹35 ಸಾವಿರ ವೆಚ್ಚದಲ್ಲಿ ಪಾದಯಾತ್ರೆ ಪೂರ್ಣಗೊಳಿಸುವ ಯೋಜನೆ ಇದೆ. ದುಡಿಮೆಯಿಂದ ಗಳಿಸಿದ ಹಣವಲ್ಲದೆ ವೆಚ್ಚವನ್ನು ಕೆಲ ಗೆಳೆಯರು ಭರಿಸುವ ಭರವಸೆಯನ್ನು ನೀಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ</strong>: ಐತಿಹಾಸಿಕ ಸ್ಥಳಗಳ ಅಧ್ಯಯನ ಮಾಡುವ ಉದ್ದೇಶದಿಂದ ಇಬ್ಬರು ಯುವಕರು ಕಾಲ್ನಡಿಗೆಯ ಮೂಲಕ ಕರ್ನಾಟಕದಿಂದ ಕಾಶ್ಮೀರಕ್ಕೆ ಹೊರಟಿದ್ದಾರೆ.</p>.<p>ದಕ್ಷಿಣಕನ್ನಡ ಜಿಲ್ಲೆ ಬಂಟ್ವಾಳ ತಾಲ್ಲೂಕಿನ ಪಜೀರ್ ಗ್ರಾಮದ ಮೆಹತಾಬ್(21) ಹಾಗೂ ಬಿಲಾಲ್(18) ಸೋಮವಾರ ಪಾದ<br />ಯಾತ್ರೆ ಆರಂಭಿಸಿದ್ದು, ಮಧ್ಯಾಹ್ನ ವೇಳೆ ಪಡುಬಿದ್ರಿ ತಲುಪಿದ್ದಾರೆ.</p>.<p>ಮೆಹತಾಬ್ ಪ್ರಥಮ ಪಿಯುಸಿವರೆಗೆ ಕಲಿತಿದ್ದು, ಸೂಪರ್ ಮಾರ್ಕೆಟ್ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಬಿಲಾಲ್ ಈ ಬಾರಿ ಎಸ್ಸೆಸ್ಸೆಲ್ಸಿ ಉತ್ತೀರ್ಣನಾಗಿದ್ದು, ಶಿಕ್ಷಣ ಮುಂದುವರಿಸುವ ಇಚ್ಛೆಯನ್ನು ಹೊಂದಿದ್ದಾನೆ. ಲಾಕ್ಡೌನ್ನಿಂದ ಕೆಲಸವಿಲ್ಲದೇ ಮನೆಯಲ್ಲಿದ್ದ ವೇಳೆ ಸಾಧನೆ ಮಾಡಬೇಕೆಂಬ ಕನಸು ಕಂಡಿದ್ದರು. ಇಬ್ಬರು ಜೊತೆಗೂಡಿ ಪಾದಯಾತ್ರೆ ಮಾಡುವ ಬಗ್ಗೆ 4 ತಿಂಗಳ ಹಿಂದೆ ಯೋಜನೆ ಹಾಕಿಕೊಂಡಿದ್ದರು.</p>.<p>ಅದರಂತೆ 2,500 ಕಿ.ಮೀ. ದೂರ ಸಾಗುವ 90 ದಿನಗಳ ಪಾದಯಾತ್ರೆಯನ್ನು ಆರಂಭಿಸಿದ್ದು, ಮಾರ್ಗದಲ್ಲಿನ ಮಸೀದಿ, ಚರ್ಚ್ ಹಾಗೂ ಮಂದಿರಗಳ ಬಗ್ಗೆ ಮಾಹಿತಿಯನ್ನು ಯೂಟ್ಯೂಬ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ ಎಂದು ಮೆಹತಾಬ್ ತಿಳಿಸಿದರು.</p>.<p>ದಿನವೊಂದಕ್ಕೆ 50ರಿಂದ 70 ಕಿ.ಮೀ. ಕ್ರಮಿಸುವ ಗುರಿ ಹೊಂದಲಾಗಿದೆ. ರಾತ್ರಿ ವೇಳೆ ಪೆಟ್ರೋಲ್ ಬಂಕ್ ಇಲ್ಲವೇ ಇತರೆಡೆ ಟೆಂಟ್ಹೌಸ್ ನಿರ್ಮಿಸಿ ವಿಶ್ರಾಂತಿ ಪಡೆಯುತ್ತೇವೆ. ಬೆಳಿಗ್ಗೆ ಎದ್ದು ಯಾತ್ರೆ ಮುಂದುವರೆಸಲಾಗುವುದು ಎಂದರು.</p>.<p>ದಿನವೊಂದಕ್ಕೆ ₹350 ರಂತೆ ಸುಮಾರು ₹35 ಸಾವಿರ ವೆಚ್ಚದಲ್ಲಿ ಪಾದಯಾತ್ರೆ ಪೂರ್ಣಗೊಳಿಸುವ ಯೋಜನೆ ಇದೆ. ದುಡಿಮೆಯಿಂದ ಗಳಿಸಿದ ಹಣವಲ್ಲದೆ ವೆಚ್ಚವನ್ನು ಕೆಲ ಗೆಳೆಯರು ಭರಿಸುವ ಭರವಸೆಯನ್ನು ನೀಡಿದ್ದಾರೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>