<p><strong>ಉಡುಪಿ</strong>: ಸಮಾಜದಲ್ಲಿ ಯಾವುದೇ ಕಾರ್ಯ ನಿರ್ವಹಿಸಬೇಕಾದರೆ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವ ಸಮುದಾಯವು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.</p>.<p>ಬ್ರಹ್ಮಗಿರಿಯ ಭಾರತೀಯ ರೆಡ್ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.<br /><br />ಸೃಜನಶೀಲತೆಯು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಂತರ್ಗತವಾಗಿರುತ್ತದೆ. ಆ ಶಕ್ತಿಯನ್ನು ಹೊರಸೂಸಲು ಪರಿಣಾಮಕಾರಿ ತರಬೇತಿ ಅಗತ್ಯವಾಗಿದೆ. ತರಬೇತಿಯಿಂದ ಸೃಜನಶೀಲತೆಯು ಪಕ್ವಗೊಳ್ಳುತ್ತದೆ ಎಂದು ಹೇಳಿದರು.</p>.<p>ಸಮಾಜಕ್ಕೆ ಒಳಿತು ಮಾಡುವ, ಇತರರ ಕಷ್ಟಗಳಿಗೆ ಸ್ಪಂದಿಸುವ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಉತ್ತಮ ಸಂವಹನ ಕೌಶಲ ಹೊಂದುವುದರೊಂದಿಗೆ ಸರಿ ತಪ್ಪುಗಳನ್ನು ಧೈರ್ಯವಾಗಿ ಹೇಳುವ, ಎಲ್ಲರೊಂದಿಗೂ ಮುಕ್ತವಾಗಿ ಬೆರೆಯುವ ಗುಣವನ್ನು ನಾಯಕನಾದವರು ಹೊಂದಿರಬೇಕು ಎಂದರು. <br /><br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವಕರ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿ ಡಾ. ವಿವೇಕಾನಂದ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿಗಳಾದ ಎಸಿಟಿ ಕೇಂದ್ರ ಹುಬ್ಬಳ್ಳಿಯ ಮುಖ್ಯಸ್ಥೆ ಯಶವಂತಿ, ರೆಡ್ಕ್ರಾಸ್ ಹಾಗೂ ಡಿಡಿಆರ್ಸಿ ಸಿಬ್ಬಂದಿ ಉಪಸ್ಥಿತರಿದ್ದರು. <br /><br />ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೆಡ್ಕ್ರಾಸ್ ಘಟಕದ ಗೌರವ ಕಾರ್ಯದರ್ಶಿ ಗಣನಾಥ ಎಕ್ಕಾರು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಸಮಾಜದಲ್ಲಿ ಯಾವುದೇ ಕಾರ್ಯ ನಿರ್ವಹಿಸಬೇಕಾದರೆ ನಾಯಕತ್ವ ಗುಣ ಅತೀ ಮುಖ್ಯವಾಗಿರುತ್ತದೆ. ದೇಶದಲ್ಲಿ 18 ರಿಂದ 35 ವರ್ಷದೊಳಗಿನ ಯುವಜನರ ಸಂಖ್ಯೆಯು ಸುಮಾರು ಶೇ 60-65 ರಷ್ಟು ಇದ್ದು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಯುವ ಸಮುದಾಯವು ತಮ್ಮದೇ ರೀತಿಯಲ್ಲಿ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.</p>.<p>ಬ್ರಹ್ಮಗಿರಿಯ ಭಾರತೀಯ ರೆಡ್ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ವ್ಯಕ್ತಿತ್ವ ವಿಕಸನ ಶಿಬಿರವನ್ನು ಆಯೋಜಿಸಲಾಗಿದೆ ಎಂದರು.<br /><br />ಸೃಜನಶೀಲತೆಯು ಪ್ರತಿಯೊಬ್ಬ ವ್ಯಕ್ತಿಯಲ್ಲಿ ಅಂತರ್ಗತವಾಗಿರುತ್ತದೆ. ಆ ಶಕ್ತಿಯನ್ನು ಹೊರಸೂಸಲು ಪರಿಣಾಮಕಾರಿ ತರಬೇತಿ ಅಗತ್ಯವಾಗಿದೆ. ತರಬೇತಿಯಿಂದ ಸೃಜನಶೀಲತೆಯು ಪಕ್ವಗೊಳ್ಳುತ್ತದೆ ಎಂದು ಹೇಳಿದರು.</p>.<p>ಸಮಾಜಕ್ಕೆ ಒಳಿತು ಮಾಡುವ, ಇತರರ ಕಷ್ಟಗಳಿಗೆ ಸ್ಪಂದಿಸುವ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಉತ್ತಮ ಸಂವಹನ ಕೌಶಲ ಹೊಂದುವುದರೊಂದಿಗೆ ಸರಿ ತಪ್ಪುಗಳನ್ನು ಧೈರ್ಯವಾಗಿ ಹೇಳುವ, ಎಲ್ಲರೊಂದಿಗೂ ಮುಕ್ತವಾಗಿ ಬೆರೆಯುವ ಗುಣವನ್ನು ನಾಯಕನಾದವರು ಹೊಂದಿರಬೇಕು ಎಂದರು. <br /><br /> ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಾಂಶುಪಾಲ ನಿತ್ಯಾನಂದ ವಿ.ಗಾಂವಕರ ಮಾತನಾಡಿದರು.</p>.<p>ಸಂಪನ್ಮೂಲ ವ್ಯಕ್ತಿ ಡಾ. ವಿವೇಕಾನಂದ ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ರೆಡ್ಕ್ರಾಸ್ ಆಡಳಿತ ಮಂಡಳಿ ಸದಸ್ಯ ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿಗಳಾದ ಎಸಿಟಿ ಕೇಂದ್ರ ಹುಬ್ಬಳ್ಳಿಯ ಮುಖ್ಯಸ್ಥೆ ಯಶವಂತಿ, ರೆಡ್ಕ್ರಾಸ್ ಹಾಗೂ ಡಿಡಿಆರ್ಸಿ ಸಿಬ್ಬಂದಿ ಉಪಸ್ಥಿತರಿದ್ದರು. <br /><br />ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರೆಡ್ಕ್ರಾಸ್ ಘಟಕದ ಗೌರವ ಕಾರ್ಯದರ್ಶಿ ಗಣನಾಥ ಎಕ್ಕಾರು ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>