<p><strong>ಉಡುಪಿ</strong>: ಜಿಲ್ಲಾ ಪಂಚಾಯಿತಿಯಲ್ಲಿ 2019-20ರ ಸಾಲಿನಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ ₹ 24 ಕೋಟಿ ಅನುದಾನ ಬಳಕೆಯಾಗದೆ ವಾಪಸ್ ಹೋಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಣಯ ಮಾಡಲಾಯಿತು.</p>.<p>ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.</p>.<p>2019-20ನೇ ಸಾಲಿನಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಮೂಲಕ ನಡೆದ ಕಾಮಗಾರಿಗಳಿಗೆ ಬಿಲ್ ಸಲ್ಲಿಕೆಯಾಗಿದ್ದರೂ ಖಜಾನೆಗೆ ಸಲ್ಲಿಸುವಲ್ಲಿ ವಿಳಂಬ ಮಾಡಲಾಗಿದೆ. ಪರಿಣಾಮ ₹ 24 ಕೋಟಿ ಅನುದಾನ ವಾಪಸ್ ಹೋಗಿದೆ. ಕಾಮಗಾರಿಗಳು ಮುಕ್ತಾಯಗೊಂಡಿದ್ದರೂ ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿಯಾಗಿಲ್ಲ ಎಂದು ಶಾಸಕ ರಘುಪತಿ ಭಟ್ ವಿಷಯ ಪ್ರಸ್ತಾಪಿಸಿದರು.</p>.<p>ಬಿಲ್ ಮಂಜೂರಾಗದಿದ್ದರೆ ಮುಂದೆ ಕಾಮಗಾರಿ ನಿರ್ವಹಿಸಲು ಯಾರೂ ಬರುವುದಿಲ್ಲ. ಅನುದಾನದ ಸಮರ್ಪಕ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ನಿರ್ಣಯ ಸಿದ್ಧಪಡಿಸಿ, ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಬೇಕು ಎಂದು ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿಯ ಸದಸ್ಯರು ಒತ್ತಾಯಿಸಿದರು.</p>.<p>ಅನುದಾನ ವಾಪಸ್ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ವರದಿ ಶೀಘ್ರದಲ್ಲಿ ದೊರೆಯಲಿದೆ. ಜತೆಗೆ ನಿರ್ಣಯ ಸಿದ್ಧಪಡಿಸಿ ಇಲಾಖಾ ಮುಖ್ಯಸ್ಥರಿಗೆ ಕಳುಹಿಸಲಾಗುವುದು ಎಂದು ಸಿಇಒ ಪ್ರೀತಿ ಗೆಹ್ಲೋಟ್ ತಿಳಿಸಿದರು.</p>.<p>ಸದಸ್ಯೆ ಶಿಲ್ಪಾ ಜಿ. ಸುವರ್ಣ ಮಾತನಾಡಿ, ಮುದರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ವಾಣಿಜ್ಯ ಕಟ್ಟಡ ಒಡೆದು ಹಾಕಲಾಗಿದ್ದು, ಕ್ರಮಕ್ಕೆ ಒತ್ತಾಯಿಸಿದರು. ನಿಯಮ ಪಾಲಿಸದಿದ್ದರೆ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಿಇಒ ತಿಳಿಸಿದರು.</p>.<p>ಸದಸ್ಯೆ ಜ್ಯೋತಿ ಹರೀಶ್ ಮಾತನಾಡಿ, ವರಂಗ ವ್ಯಾಪ್ತಿಯ 1,100 ಎಕ್ರೆ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯ ಮಾಡಲು ಜೈನ ಮಠದ ಆಕ್ಷೇಪವಿದೆ. ಇದರಲ್ಲಿನ ಸರ್ಕಾರಿ ಜಾಗ ಗುರುತಿಸಬೇಕು. ಹೆಬ್ರಿ-ಮುನಿಯಾಲು ಮಾರ್ಗದಲ್ಲಿ ಎಕ್ಸ್ಪ್ರೆಸ್ ಲೇನ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಡ್ಡಿಯಾಗಿದೆ. ಸೋಮೇಶ್ವರ ಬಳಿಯ ರಸ್ತೆ ಕಾಮಗಾರಿಯ ಅವ್ಯವಸ್ಥೆ ಬಗ್ಗೆಯೂ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p>ಕುಂದಾಪುರ ವಲಯ ಅರಣ್ಯಾಧಿಕಾರಿ ಆಶೀಶ್ ರೆಡ್ಡಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.</p>.<p>ಸದಸ್ಯ ಶಶಿಕಾಂತ ಮಾತನಾಡಿ, ಪಡುಬಿದ್ರಿಯಲ್ಲಿ ಸರ್ವಿಸ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ವಿಳಂಬದಿಂದ ಮಳೆಗಾಲದಲ್ಲಿ ಸಮಸ್ಯೆಯಾಗಿದೆ ಎಂದು ಆಕ್ಷೇಪಿಸಿದರು. ಸ್ಥಳ ಪರಿಶೀಲನೆ ಮಾಡುವುದಾಗಿ ಅಧ್ಯಕ್ಷ ದಿನಕರ ಬಾಬು ತಿಳಿಸಿದರು.</p>.<p>ಮರಳು ಸಮಸ್ಯೆ ಬಗ್ಗೆ ಸದಸ್ಯ ಜನಾರ್ಧನ ತೋನ್ಸೆ ಅವರ ಪ್ರಶ್ನೆಗೆ ಉತ್ತರಿಸಿದ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯ್ಕ್, ರಾಜ್ಯದಲ್ಲಿ ಹೊಸ ಕರ್ನಾಟಕ ಮರಳು ನೀತಿ-2020 ಜಾರಿಗೆ ಬಂದಿದ್ದು, ಆ ಪ್ರಕಾರ ಮರಳು ವಿತರಣೆ ನಡೆಯಲಿದೆ. ರಾಜ್ಯದಾದ್ಯಂತ ಏಕರೂಪದ ದರ ನಿಗದಿಯಾಗಲಿದೆ ಎಂದರು.</p>.<p>ಕೋವಿಡ್ ವಾರಿಯರ್ಸ್ಗಳಿಗೆ ಸಭೆಯಲ್ಲಿ ಚಪ್ಪಾಳೆ ಮೂಲಕ ಅಭಿನಂದಿಸಲಾಯಿತು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ಶೋಭಾ ಜಿ. ಪುತ್ರನ್, ಸುಮಿತ್ ಶೆಟ್ಟಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಜಿಲ್ಲಾ ಪಂಚಾಯಿತಿಯಲ್ಲಿ 2019-20ರ ಸಾಲಿನಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದಿಂದ ₹ 24 ಕೋಟಿ ಅನುದಾನ ಬಳಕೆಯಾಗದೆ ವಾಪಸ್ ಹೋಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ಣಯ ಮಾಡಲಾಯಿತು.</p>.<p>ಮಂಗಳವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ದಿನಕರ ಬಾಬು ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.</p>.<p>2019-20ನೇ ಸಾಲಿನಲ್ಲಿ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಮೂಲಕ ನಡೆದ ಕಾಮಗಾರಿಗಳಿಗೆ ಬಿಲ್ ಸಲ್ಲಿಕೆಯಾಗಿದ್ದರೂ ಖಜಾನೆಗೆ ಸಲ್ಲಿಸುವಲ್ಲಿ ವಿಳಂಬ ಮಾಡಲಾಗಿದೆ. ಪರಿಣಾಮ ₹ 24 ಕೋಟಿ ಅನುದಾನ ವಾಪಸ್ ಹೋಗಿದೆ. ಕಾಮಗಾರಿಗಳು ಮುಕ್ತಾಯಗೊಂಡಿದ್ದರೂ ಗುತ್ತಿಗೆದಾರರಿಗೆ ಸಕಾಲದಲ್ಲಿ ಹಣ ಪಾವತಿಯಾಗಿಲ್ಲ ಎಂದು ಶಾಸಕ ರಘುಪತಿ ಭಟ್ ವಿಷಯ ಪ್ರಸ್ತಾಪಿಸಿದರು.</p>.<p>ಬಿಲ್ ಮಂಜೂರಾಗದಿದ್ದರೆ ಮುಂದೆ ಕಾಮಗಾರಿ ನಿರ್ವಹಿಸಲು ಯಾರೂ ಬರುವುದಿಲ್ಲ. ಅನುದಾನದ ಸಮರ್ಪಕ ಬಳಕೆ ಮಾಡದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ನಿರ್ಣಯ ಸಿದ್ಧಪಡಿಸಿ, ಇಲಾಖಾ ಮುಖ್ಯಸ್ಥರಿಗೆ ಸಲ್ಲಿಸಬೇಕು ಎಂದು ಶಾಸಕರು ಹಾಗೂ ಜಿಲ್ಲಾ ಪಂಚಾಯಿತಿಯ ಸದಸ್ಯರು ಒತ್ತಾಯಿಸಿದರು.</p>.<p>ಅನುದಾನ ವಾಪಸ್ ಕುರಿತು ತನಿಖೆ ನಡೆಸಲು ಸಮಿತಿ ರಚಿಸಲಾಗಿದ್ದು, ವರದಿ ಶೀಘ್ರದಲ್ಲಿ ದೊರೆಯಲಿದೆ. ಜತೆಗೆ ನಿರ್ಣಯ ಸಿದ್ಧಪಡಿಸಿ ಇಲಾಖಾ ಮುಖ್ಯಸ್ಥರಿಗೆ ಕಳುಹಿಸಲಾಗುವುದು ಎಂದು ಸಿಇಒ ಪ್ರೀತಿ ಗೆಹ್ಲೋಟ್ ತಿಳಿಸಿದರು.</p>.<p>ಸದಸ್ಯೆ ಶಿಲ್ಪಾ ಜಿ. ಸುವರ್ಣ ಮಾತನಾಡಿ, ಮುದರಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ವಾಣಿಜ್ಯ ಕಟ್ಟಡ ಒಡೆದು ಹಾಕಲಾಗಿದ್ದು, ಕ್ರಮಕ್ಕೆ ಒತ್ತಾಯಿಸಿದರು. ನಿಯಮ ಪಾಲಿಸದಿದ್ದರೆ ಸಂಬಂಧಪಟ್ಟವರ ವಿರುದ್ದ ಕ್ರಮ ಕೈಗೊಳ್ಳುವುದಾಗಿ ಸಿಇಒ ತಿಳಿಸಿದರು.</p>.<p>ಸದಸ್ಯೆ ಜ್ಯೋತಿ ಹರೀಶ್ ಮಾತನಾಡಿ, ವರಂಗ ವ್ಯಾಪ್ತಿಯ 1,100 ಎಕ್ರೆ ಜಮೀನಿನಲ್ಲಿ ಅಭಿವೃದ್ಧಿ ಕಾರ್ಯ ಮಾಡಲು ಜೈನ ಮಠದ ಆಕ್ಷೇಪವಿದೆ. ಇದರಲ್ಲಿನ ಸರ್ಕಾರಿ ಜಾಗ ಗುರುತಿಸಬೇಕು. ಹೆಬ್ರಿ-ಮುನಿಯಾಲು ಮಾರ್ಗದಲ್ಲಿ ಎಕ್ಸ್ಪ್ರೆಸ್ ಲೇನ್ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಡ್ಡಿಯಾಗಿದೆ. ಸೋಮೇಶ್ವರ ಬಳಿಯ ರಸ್ತೆ ಕಾಮಗಾರಿಯ ಅವ್ಯವಸ್ಥೆ ಬಗ್ಗೆಯೂ ಗಮನ ಹರಿಸಬೇಕು ಎಂದು ಒತ್ತಾಯಿಸಿದರು.</p>.<p>ಕುಂದಾಪುರ ವಲಯ ಅರಣ್ಯಾಧಿಕಾರಿ ಆಶೀಶ್ ರೆಡ್ಡಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.</p>.<p>ಸದಸ್ಯ ಶಶಿಕಾಂತ ಮಾತನಾಡಿ, ಪಡುಬಿದ್ರಿಯಲ್ಲಿ ಸರ್ವಿಸ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ ವಿಳಂಬದಿಂದ ಮಳೆಗಾಲದಲ್ಲಿ ಸಮಸ್ಯೆಯಾಗಿದೆ ಎಂದು ಆಕ್ಷೇಪಿಸಿದರು. ಸ್ಥಳ ಪರಿಶೀಲನೆ ಮಾಡುವುದಾಗಿ ಅಧ್ಯಕ್ಷ ದಿನಕರ ಬಾಬು ತಿಳಿಸಿದರು.</p>.<p>ಮರಳು ಸಮಸ್ಯೆ ಬಗ್ಗೆ ಸದಸ್ಯ ಜನಾರ್ಧನ ತೋನ್ಸೆ ಅವರ ಪ್ರಶ್ನೆಗೆ ಉತ್ತರಿಸಿದ, ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ರಾಂಜಿ ನಾಯ್ಕ್, ರಾಜ್ಯದಲ್ಲಿ ಹೊಸ ಕರ್ನಾಟಕ ಮರಳು ನೀತಿ-2020 ಜಾರಿಗೆ ಬಂದಿದ್ದು, ಆ ಪ್ರಕಾರ ಮರಳು ವಿತರಣೆ ನಡೆಯಲಿದೆ. ರಾಜ್ಯದಾದ್ಯಂತ ಏಕರೂಪದ ದರ ನಿಗದಿಯಾಗಲಿದೆ ಎಂದರು.</p>.<p>ಕೋವಿಡ್ ವಾರಿಯರ್ಸ್ಗಳಿಗೆ ಸಭೆಯಲ್ಲಿ ಚಪ್ಪಾಳೆ ಮೂಲಕ ಅಭಿನಂದಿಸಲಾಯಿತು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ ಮಾರಾಳಿ, ಶೋಭಾ ಜಿ. ಪುತ್ರನ್, ಸುಮಿತ್ ಶೆಟ್ಟಿ, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>