<p><strong>ಮುಡಿಪು:</strong> ರಾಷ್ಟ್ರದ ಶೈಕ್ಷಣಿಕ ಸಾಧನೆಯನ್ನು ಜನಸಂಖ್ಯೆಯ ಆಧಾರಿತವಾಗಿ ಪರಿಗಣಿಸಿದರೆ ಇತರ ದೇಶಗಳು ಉನ್ನತ ಶಿಕ್ಷಣದಲ್ಲಿ ಯಶಸ್ವಿ ಸಾಧನೆ ತೋರಿದೆ, ಆದರೆ ಭಾರತವು ನಿರೀಕ್ಷಿತ ಮಟ್ಟದಲ್ಲಿ ಸಾಧನೆಯನ್ನು ಕಂಡು ಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಸಿ.ಶಿವಶಂಕರ ಮೂರ್ತಿ ಎಂದರು.<br /> <br /> ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ವತಿಯಿಂದ ಮಂಗಳವಾರ ವಿ.ವಿ. ಯಕ್ಷಗಾನ ಕಲಾಮಂದಿರದಲ್ಲಿ ನಡೆದ ರಾಜ್ಯಮಟ್ಟದ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಉತ್ಸವ ‘ಮ್ಯಾಗ್ನಂ-2011’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ವಿವಿಧ ಕ್ಷೇತ್ರಗಳಲ್ಲಿ ಯುವ ಪೀಳಿಗೆಯ ಸಾಧನೆ ದೇಶದ ಉನ್ನತಿಗೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ವಿದ್ಯಾವಂತ ಸಮಾಜ ನಿರ್ಮಾಣ ನಮ್ಮ ಮೊದಲ ಕರ್ತವ್ಯವಾಗಬೇಕಿದೆ. ಹೀಗಾದರೆ ದೇಶದ ಬಾಹ್ಯಾಕಾಶ, ಸಾರ್ವಜನಿಕ ರಂಗ, ವೈಜ್ಞಾನಿಕ, ಕೈಗಾರಿಕೆ ಕ್ಷೇತ್ರದಲ್ಲಿ ಸಾಧನೆ ಮೆರೆಯಲು ಸಾಧ್ಯ ಎಂ ದರು. <br /> <br /> ಬೆಂಗಳೂರಿನ ಅಶ್ವಿನ್ ಅಜಿಲ ಮಾತನಾಡಿ, ಪ್ರಸ್ತುತ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ಸಿನ ಮೆಟ್ಟಿಲೇರಬೇಕು ಎಂದರು. ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಸ್.ಯಡಿಪಡಿತ್ತಾಯ, ವೆಂಕಟೇಶ್ ಪಿ.ಎಸ್, ಶಕೀರಾ ಇರ್ಫಾನ, ಕಾರ್ಯಕ್ರಮ ಸಂಯೋಜಕಿ ಶ್ರೀದೇವಿ ರಾವ್, ರೋವಿನಾ ಶರೋಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಡಿಪು:</strong> ರಾಷ್ಟ್ರದ ಶೈಕ್ಷಣಿಕ ಸಾಧನೆಯನ್ನು ಜನಸಂಖ್ಯೆಯ ಆಧಾರಿತವಾಗಿ ಪರಿಗಣಿಸಿದರೆ ಇತರ ದೇಶಗಳು ಉನ್ನತ ಶಿಕ್ಷಣದಲ್ಲಿ ಯಶಸ್ವಿ ಸಾಧನೆ ತೋರಿದೆ, ಆದರೆ ಭಾರತವು ನಿರೀಕ್ಷಿತ ಮಟ್ಟದಲ್ಲಿ ಸಾಧನೆಯನ್ನು ಕಂಡು ಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಸಿ.ಶಿವಶಂಕರ ಮೂರ್ತಿ ಎಂದರು.<br /> <br /> ಮಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ಅಧ್ಯಯನ ವಿಭಾಗದ ವತಿಯಿಂದ ಮಂಗಳವಾರ ವಿ.ವಿ. ಯಕ್ಷಗಾನ ಕಲಾಮಂದಿರದಲ್ಲಿ ನಡೆದ ರಾಜ್ಯಮಟ್ಟದ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಉತ್ಸವ ‘ಮ್ಯಾಗ್ನಂ-2011’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ವಿವಿಧ ಕ್ಷೇತ್ರಗಳಲ್ಲಿ ಯುವ ಪೀಳಿಗೆಯ ಸಾಧನೆ ದೇಶದ ಉನ್ನತಿಗೆ ಕಾರಣವಾಗಲಿದೆ. ಈ ನಿಟ್ಟಿನಲ್ಲಿ ವಿದ್ಯಾವಂತ ಸಮಾಜ ನಿರ್ಮಾಣ ನಮ್ಮ ಮೊದಲ ಕರ್ತವ್ಯವಾಗಬೇಕಿದೆ. ಹೀಗಾದರೆ ದೇಶದ ಬಾಹ್ಯಾಕಾಶ, ಸಾರ್ವಜನಿಕ ರಂಗ, ವೈಜ್ಞಾನಿಕ, ಕೈಗಾರಿಕೆ ಕ್ಷೇತ್ರದಲ್ಲಿ ಸಾಧನೆ ಮೆರೆಯಲು ಸಾಧ್ಯ ಎಂ ದರು. <br /> <br /> ಬೆಂಗಳೂರಿನ ಅಶ್ವಿನ್ ಅಜಿಲ ಮಾತನಾಡಿ, ಪ್ರಸ್ತುತ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಯಶಸ್ಸಿನ ಮೆಟ್ಟಿಲೇರಬೇಕು ಎಂದರು. ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲಸಚಿವ ಪ್ರೊ.ಪಿ.ಎಸ್.ಯಡಿಪಡಿತ್ತಾಯ, ವೆಂಕಟೇಶ್ ಪಿ.ಎಸ್, ಶಕೀರಾ ಇರ್ಫಾನ, ಕಾರ್ಯಕ್ರಮ ಸಂಯೋಜಕಿ ಶ್ರೀದೇವಿ ರಾವ್, ರೋವಿನಾ ಶರೋಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>