‘ಕನ್ನರ್ಪಾಡಿಯ ಜಯದುರ್ಗಾ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಕಾರ್ಯಕ್ರಮಗಳು ನಡೆಯುತ್ತಿದ್ದು ಸಾವಿರಾರು ಜನರು ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಕಾರು ಹಾಗೂ ದ್ವಿಚಕ್ರ ವಾಹನಗಳಲ್ಲಿ ಬರುವ ಜನರು ರಸ್ತೆಯ ಬದಿಯಲ್ಲಿಯೇ, ಎಲ್ಲೆಂದರಲ್ಲಿ ವಾಹನವನ್ನು ಅಡ್ಡಾದಿಡ್ಡಿ ನಿಲುಗಡೆ ಮಾಡುತ್ತಿರುವುದು ಸಮಸ್ಯೆಗೆ ಮೂಲ ಕಾರಣ. ಕಿರಿದಾದ ರಸ್ತೆಯ ಎರಡೂಬದಿಗಳಲ್ಲಿ ವಾಹನ ನಿಲ್ಲಿಸಿದ ಪರಿಣಾಮ ವಾಹನ ಸಂಚಾರ ಸಂಪೂ ರ್ಣ ಸ್ತಬ್ಧವಾಯಿತು’ ಎಂದು ಸ್ಥಳೀಯರು ಮಾಹಿತಿ ನೀಡಿದರು.