ಉಡುಪಿ ಶ್ರೀಕೃಷ್ಣಮಠಕ್ಕೆ ಬುಧವಾರ ಭೇಟಿ ನೀಡಿ ದೇವರ ಆಶೀರ್ವಾದ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗ ಳೊಂದಿಗೆ ಮಾತನಾಡಿದ ಅವರು, ದಲಿತ ಸಮುದಾಯ ಕೇವಲ ಮುಖ್ಯಮಂತ್ರಿ ಮಾತ್ರವಲ್ಲ ಪ್ರಧಾನಿಯಾಗುವ ಅರ್ಹತೆ ಯನ್ನೂ ಹೊಂದಿದೆ. ಅದನ್ನು ಕೇವಲ ಒತ್ತಾಯದಿಂದ ಈಡೇರಿಸಿಕೊಳ್ಳ ಲಾಗದು. ಆಡಳಿತ ನಡೆಸುವ ರಾಜಕೀಯ ಪಕ್ಷಗಳು ನಿರ್ಧಾರ ಮಾಡಬೇಕು. ದಲಿತರ ವ್ಯಕ್ತಿಯನ್ನು ಮುಖ್ಯ ಮಂತ್ರಿ ಯನ್ನಾಗಿಸುವ ವಿಶಾಲ ಮನೋಭಾವ ಬೆಳೆಸಿಕೊಳ್ಳಬೇಕು. ಅದನ್ನು ಮುಂದೆ ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷಗಳು ಬೆಳೆಸಿಕೊಳ್ಳಬೇಕು. ಈ ಸರ್ಕಾರ ಮಾತ್ರವಲ್ಲ, ಮುಂದೆ ಅಧಿಕಾರಕ್ಕೆ ಬರುವ ರಾಜಕೀಯ ಪಕ್ಷ ಕೂಡಾ ದಲಿತರನ್ನು ಮುಖ್ಯಮಂತ್ರಿ ಯನ್ನಾಗಿಸುವ ವಿಶ್ವಾಸ ತಮಗಿಲ್ಲ ಎಂದರು.