ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಕೃಷ್ಣಮಠಕ್ಕೆ ಭೇಟಿ ನೀಡಿ ಕೃಷ್ಣನ ದರ್ಶನ ಪಡೆದರು. ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಗಳು ಅನುಗ್ರಹ ಮಂತ್ರಾಕ್ಷತೆ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ್, ಜಿಲ್ಲಾ ನಿರ್ದೇಶಕ ಗಣೇಶ್, ಪ್ರಾದೇಶಿಕ ನಿರ್ದೇಶಕ ವಸಂತ್ ಸಾಲ್ಯಾನ್, ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಮಠದ ವಿಷ್ಣು ಪಾಡಿಗಾರ್, ವಾಸುದೇವ ಪೆರಂಪಳ್ಳಿ, ಮುರಳಿ ಕಡೆಕಾರ್, ಗಣೇಶ್ ರಾವ್, ಗಂಗಾಧರ್ ರಾವ್ ಇದ್ದರು.