<p>ಕುಂದಾಪುರ: ಭಾನುವಾರ ನಡೆದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೆಲವೊಂದು ಮತಗಟ್ಟೆಯಲ್ಲಿ ಮತಪಟ್ಟಿಯಲ್ಲಿ ಗೊಂದಲ ಉಂಟಾಗಿ ಕೆಲವರು ಮತದಾನ ಮಾಡದೇ ವಾಪಸ್ ಬರಬೇಕಾಯಿತು.<br /> <br /> ಪದವೀಧರ ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಪಡೆದುಕೊಂಡಿದ್ದ ಕೆಲವು ಮತದಾರರು ಚುನಾವಣಾ ಆಯೋಗದ ಬದಲಾದ ತೀರ್ಮಾನದಿಂದ ಮತದಾನ ಮಾಡಲು ಸಾಧ್ಯವಾಗಲಿಲ್ಲ.<br /> <br /> ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗಾಗಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ಆಯೋಗ ನಿರ್ಧರಿಸಿ ಸುತ್ತೋಲೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿದ್ದ ಮತದಾರರಿಗೆ ಸೂಕ್ತ ದಾಖಲೆಗಳನ್ನು ರವಾನಿಸಲು ಸೂಚನೆ ನೀಡಲಾಗಿತ್ತು. ಈ ಸೂಚನೆಯಂತೆ ಸೂಕ್ತ ದಾಖಲೆಯನ್ನು ತಲುಪಿಸುವಂತೆ ಸಂಬಂಧಿಸಿದ ಮತದಾರಿಗೆ ಪತ್ರ ಕಳುಹಿಸುವ ವ್ಯವಸ್ಥೆಯಾಗಿದ್ದರೂ ಅದು ಸಮರ್ಪಕವಾಗಿ ನಡೆದಿಲ್ಲ ಎನ್ನುವುದು ಭಾನುವಾರ ಮತದಾನಕ್ಕೆ ಕೇಂದ್ರಕ್ಕೆ ತೆರಳಿದ ಮತದಾರರ ದೂರು. <br /> <br /> ರಾಜಕೀಯ ಪಕ್ಷಗಳಿಗೆ ನೀಡಿದ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ, ಅಧಿಕಾರಿಗಳ ಕೈಯಲ್ಲಿ ಇದ್ದ ಪಟ್ಟಿಯಲ್ಲಿ ಕೆಲವು ಮತದಾರರ ಹೆಸರು ನಾಪತ್ತೆಯಾಗಿದ್ದರಿಂದ ಮತದಾನಕ್ಕೆ ಅವಕಾಶ ನೀಡಲಿಲ್ಲ. <br /> <br /> ಮತದಾನ ಪಟ್ಟಿಯ ಫೈನಲ್ ಪಟ್ಟಿಯಲ್ಲಿ ಪ್ರಕಟವಾಗುವವರೆಗೂ ನಿದ್ರಾವಸ್ಥೆಯಲ್ಲಿರುವ ಅಧಿಕಾರಿಗಳು ಬದಲಾಗಿರುವ ನಿಯಮ ಕುರಿತು ಮತದಾರರಿಗೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ ಎಂದು ಮತದಾನ ವಂಚಿತರೊಬ್ಬರು ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಚುನಾವಣೆಯ ದಿನಾಂಕ ಪ್ರಕಟವಾದ ದಿನದಿಂದ ಇಂದಿನವರೆಗೂ ಏನಿಲ್ಲ ಎಂದರೂ ಮೂರು ಬಾರಿ ಮತದಾರ ರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಗಿದೆ. ಭಾನುವಾರ ಮೊಬೈಲ್ ಸ್ವಿಚ್ ಆನ್ ಮಾಡಿದ ಮತದಾರರಿಗೆ ರಾಜಕೀಯ ಪಕ್ಷದ ಮುಖಂಡರಿಂದ `ಗುಡ್ ಮಾರ್ನಿಂಗ್~ ಆರಂಭವಾಗಿ ರುವುದು ಚುನಾವಣೆಯ ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕುಂದಾಪುರ: ಭಾನುವಾರ ನಡೆದ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕೆಲವೊಂದು ಮತಗಟ್ಟೆಯಲ್ಲಿ ಮತಪಟ್ಟಿಯಲ್ಲಿ ಗೊಂದಲ ಉಂಟಾಗಿ ಕೆಲವರು ಮತದಾನ ಮಾಡದೇ ವಾಪಸ್ ಬರಬೇಕಾಯಿತು.<br /> <br /> ಪದವೀಧರ ಕ್ಷೇತ್ರದಲ್ಲಿ ಹಿಂದಿನ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಪಡೆದುಕೊಂಡಿದ್ದ ಕೆಲವು ಮತದಾರರು ಚುನಾವಣಾ ಆಯೋಗದ ಬದಲಾದ ತೀರ್ಮಾನದಿಂದ ಮತದಾನ ಮಾಡಲು ಸಾಧ್ಯವಾಗಲಿಲ್ಲ.<br /> <br /> ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗಾಗಿ ಕೆಲವು ನಿರ್ದಿಷ್ಟ ಸೂಚನೆಗಳನ್ನು ಆಯೋಗ ನಿರ್ಧರಿಸಿ ಸುತ್ತೋಲೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಿಯಲ್ಲಿದ್ದ ಮತದಾರರಿಗೆ ಸೂಕ್ತ ದಾಖಲೆಗಳನ್ನು ರವಾನಿಸಲು ಸೂಚನೆ ನೀಡಲಾಗಿತ್ತು. ಈ ಸೂಚನೆಯಂತೆ ಸೂಕ್ತ ದಾಖಲೆಯನ್ನು ತಲುಪಿಸುವಂತೆ ಸಂಬಂಧಿಸಿದ ಮತದಾರಿಗೆ ಪತ್ರ ಕಳುಹಿಸುವ ವ್ಯವಸ್ಥೆಯಾಗಿದ್ದರೂ ಅದು ಸಮರ್ಪಕವಾಗಿ ನಡೆದಿಲ್ಲ ಎನ್ನುವುದು ಭಾನುವಾರ ಮತದಾನಕ್ಕೆ ಕೇಂದ್ರಕ್ಕೆ ತೆರಳಿದ ಮತದಾರರ ದೂರು. <br /> <br /> ರಾಜಕೀಯ ಪಕ್ಷಗಳಿಗೆ ನೀಡಿದ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ, ಅಧಿಕಾರಿಗಳ ಕೈಯಲ್ಲಿ ಇದ್ದ ಪಟ್ಟಿಯಲ್ಲಿ ಕೆಲವು ಮತದಾರರ ಹೆಸರು ನಾಪತ್ತೆಯಾಗಿದ್ದರಿಂದ ಮತದಾನಕ್ಕೆ ಅವಕಾಶ ನೀಡಲಿಲ್ಲ. <br /> <br /> ಮತದಾನ ಪಟ್ಟಿಯ ಫೈನಲ್ ಪಟ್ಟಿಯಲ್ಲಿ ಪ್ರಕಟವಾಗುವವರೆಗೂ ನಿದ್ರಾವಸ್ಥೆಯಲ್ಲಿರುವ ಅಧಿಕಾರಿಗಳು ಬದಲಾಗಿರುವ ನಿಯಮ ಕುರಿತು ಮತದಾರರಿಗೆ ಮುಂಚಿತವಾಗಿ ಮಾಹಿತಿ ನೀಡಿರಲಿಲ್ಲ ಎಂದು ಮತದಾನ ವಂಚಿತರೊಬ್ಬರು ಆಕ್ಷೇಪ ವ್ಯಕ್ತಪಡಿಸಿದರು.<br /> <br /> ಚುನಾವಣೆಯ ದಿನಾಂಕ ಪ್ರಕಟವಾದ ದಿನದಿಂದ ಇಂದಿನವರೆಗೂ ಏನಿಲ್ಲ ಎಂದರೂ ಮೂರು ಬಾರಿ ಮತದಾರ ರನ್ನು ಸಂಪರ್ಕಿಸುವ ಪ್ರಯತ್ನ ಮಾಡಲಾಗಿದೆ. ಭಾನುವಾರ ಮೊಬೈಲ್ ಸ್ವಿಚ್ ಆನ್ ಮಾಡಿದ ಮತದಾರರಿಗೆ ರಾಜಕೀಯ ಪಕ್ಷದ ಮುಖಂಡರಿಂದ `ಗುಡ್ ಮಾರ್ನಿಂಗ್~ ಆರಂಭವಾಗಿ ರುವುದು ಚುನಾವಣೆಯ ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>