<p>ಬ್ರಹ್ಮಾವರ: ದೂಪದಕಟ್ಟೆ ಹೊನ್ನಾಳ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದುರಸ್ತಿಗೆ ಆಗ್ರಹಿಸಿ ಹೊನ್ನಾಳ ಮತ್ತು ಆಸುಪಾಸಿನ ನಾಗರಿಕರು ಮಂಗಳವಾರ ಕರೆ ನೀಡಿದ್ದ ಒಂದು ದಿನದ ಬಂದ್ ಉತ್ತಮ ಬೆಂಬಲ ವ್ಯಕ್ತವಾಯಿತು. <br /> <br /> ಬೆಳಿಗ್ಗೆಯಿಂದಲೇ ಹೊನ್ನಾಳ, ಕುಕ್ಕುಡೆ, ಗಾಂಧಿನಗರ, ಬೈಕಾಡಿ, ದೂಪದಕಟ್ಟೆ ನಾಗರಿಕರು ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿದರು. ಅಂಗಡಿಮುಂಗಟ್ಟುಗಳು ಮುಚ್ಚಿದ್ದರೆ, ಪರಿಸರದ ಶಾಲೆಗಳಿಗೆ ರಜೆ ಸಾರಲಾಯಿತು. ಸಂಜೆ ಹಾರಾಡಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನಾಕಾರರು ಸಭೆ ನಡೆಸಿದರು. <br /> <br /> ಸುಮಾರು 25 ವರ್ಷಗಳ ಹಿಂದೆ ಉಪ್ಪಿನ ಕೋಟೆಯಿಂದ ಹೊನ್ನಾಳ ಸಂಪರ್ಕಿಸುವ ರಸ್ತೆ ನಿರ್ಮಾಣಗೊಂಡಿದ್ದರೂ ಕೆಲವೆಡೆ ಮಾತ್ರ ದುರಸ್ತಿ ಕಂಡಿತ್ತು. ಇನ್ನುಳಿದ ಸುಮಾರು 4.5 ಕಿ.ಮೀ ಉದ್ದದ ರಸ್ತೆ ಯಾವುದೇ ಅಭಿವೃದ್ಧಿ ಕಾಣದೆ ಸಂಪೂರ್ಣ ಹೊಂಡಮಯವಾಗಿ ವಾಹನ ಸಂಚಾರಕ್ಕೆ ಅಯೋಗ್ಯವಾಗಿತ್ತು.<br /> <br /> ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಹೊನ್ನಾಳದಲ್ಲಿ ಶಾಲಾ ಕಾಲೇಜು, ಆಸ್ಪತ್ರೆ, ದೇವಸ್ಥಾನ, ವ್ಯಾಪಾರಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ರಸ್ತೆಯ ಅವಸ್ಥೆಯಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹೊನ್ನಾಳ ರಸ್ತೆ ದುರಸ್ತಿಗೆ ಇಟ್ಟ ಹಣ ದುರುಪಯೋಗವಾಗಿದೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ತಿಳಿಸಿದರು. ಶೀಘ್ರವೇ ರಸ್ತೆಯ ದುರಸ್ತಿ ಕಾರ್ಯ ನಡೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬ್ರಹ್ಮಾವರ: ದೂಪದಕಟ್ಟೆ ಹೊನ್ನಾಳ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು, ದುರಸ್ತಿಗೆ ಆಗ್ರಹಿಸಿ ಹೊನ್ನಾಳ ಮತ್ತು ಆಸುಪಾಸಿನ ನಾಗರಿಕರು ಮಂಗಳವಾರ ಕರೆ ನೀಡಿದ್ದ ಒಂದು ದಿನದ ಬಂದ್ ಉತ್ತಮ ಬೆಂಬಲ ವ್ಯಕ್ತವಾಯಿತು. <br /> <br /> ಬೆಳಿಗ್ಗೆಯಿಂದಲೇ ಹೊನ್ನಾಳ, ಕುಕ್ಕುಡೆ, ಗಾಂಧಿನಗರ, ಬೈಕಾಡಿ, ದೂಪದಕಟ್ಟೆ ನಾಗರಿಕರು ಸ್ವಯಂ ಪ್ರೇರಿತರಾಗಿ ಬಂದ್ ನಡೆಸಿದರು. ಅಂಗಡಿಮುಂಗಟ್ಟುಗಳು ಮುಚ್ಚಿದ್ದರೆ, ಪರಿಸರದ ಶಾಲೆಗಳಿಗೆ ರಜೆ ಸಾರಲಾಯಿತು. ಸಂಜೆ ಹಾರಾಡಿ ಗ್ರಾಮ ಪಂಚಾಯಿತಿ ಎದುರು ಪ್ರತಿಭಟನಾಕಾರರು ಸಭೆ ನಡೆಸಿದರು. <br /> <br /> ಸುಮಾರು 25 ವರ್ಷಗಳ ಹಿಂದೆ ಉಪ್ಪಿನ ಕೋಟೆಯಿಂದ ಹೊನ್ನಾಳ ಸಂಪರ್ಕಿಸುವ ರಸ್ತೆ ನಿರ್ಮಾಣಗೊಂಡಿದ್ದರೂ ಕೆಲವೆಡೆ ಮಾತ್ರ ದುರಸ್ತಿ ಕಂಡಿತ್ತು. ಇನ್ನುಳಿದ ಸುಮಾರು 4.5 ಕಿ.ಮೀ ಉದ್ದದ ರಸ್ತೆ ಯಾವುದೇ ಅಭಿವೃದ್ಧಿ ಕಾಣದೆ ಸಂಪೂರ್ಣ ಹೊಂಡಮಯವಾಗಿ ವಾಹನ ಸಂಚಾರಕ್ಕೆ ಅಯೋಗ್ಯವಾಗಿತ್ತು.<br /> <br /> ಬ್ರಹ್ಮಾವರ ರಾಷ್ಟ್ರೀಯ ಹೆದ್ದಾರಿಗೆ ಸಮೀಪವಿರುವ ಹೊನ್ನಾಳದಲ್ಲಿ ಶಾಲಾ ಕಾಲೇಜು, ಆಸ್ಪತ್ರೆ, ದೇವಸ್ಥಾನ, ವ್ಯಾಪಾರಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಈ ರಸ್ತೆಯ ಅವಸ್ಥೆಯಿಂದ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಹೊನ್ನಾಳ ರಸ್ತೆ ದುರಸ್ತಿಗೆ ಇಟ್ಟ ಹಣ ದುರುಪಯೋಗವಾಗಿದೆ ಎಂದು ಪ್ರತಿಭಟನಾಕಾರರು ಈ ಸಂದರ್ಭದಲ್ಲಿ ತಿಳಿಸಿದರು. ಶೀಘ್ರವೇ ರಸ್ತೆಯ ದುರಸ್ತಿ ಕಾರ್ಯ ನಡೆಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>