ಮಳೆಯ ನೀರು ಹೋಗಲು ಚರಂಡಿಯ ವ್ಯವಸ್ಥೆ ಇಲ್ಲದೆ ಪೇಟೆಯಲ್ಲಿ ಹೆದ್ದಾರಿಯಲ್ಲಿಯೇ ನೀರು ತುಂಬಿದ್ದು, ಸಾರ್ವಜನಿಕರು ನಡೆದಾಡಲು ಶ್ರಮಪಡಬೇಕಾಯಿತು. ಹೆದ್ದಾರಿ ಕಾಮಗಾರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದ್ದ ನವಯುಗ ಕಂಪೆನಿಯು ನಿಧಾನಗತಿಯಲ್ಲಿ ಕಾಮಗಾರಿ ನಡೆಸುತಿದ್ದು, ಶೀಘ್ರ ಕಾಮಗಾರಿ ಮುಗಿಸುವಂತೆ ಆಗ್ರಹಿಸಿದ್ದಾರೆ. ಮುಂದೆ ಮಳೆಗಾಲ ಆರಂಭವಾಗಲಿದ್ದು, ಇದರ ಒಳಗಾಗಿ ಕಾಮಗಾರಿ ಮುಗಿಸುವಂತೆ ಸುರೇಶ್ ಪಡುಬಿದ್ರಿ ಆಗ್ರಹಿಸಿದ್ದಾರೆ.