<p><strong>ಸುರತ್ಕಲ್: </strong>ಟೆಂಡರ್ ಪ್ರಕ್ರಿಯೆ ಸಂಬಂಧ ಅರ್ಜಿದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಆದಿಲಕ್ಷ್ಮಮ್ಮ ಅವರನ್ನು ಲೋಕಾಯುಕ್ತ ಪೊಲೀಸರು ಪಣಂಬೂರು ಬೀಚ್ನಲ್ಲಿ ಗುರುವಾರ ಬಂಧಿಸಿದರು. ತಣ್ಣೀರುಬಾವಿ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಟೆಂಡರ್ ಕರೆಯಲಾಗಿತ್ತು. ಒಟ್ಟು 7 ಕಂಪೆನಿಗಳು ಟೆಂಡರ್ ಹಾಕಿದ್ದು, ಆದಿಲಕ್ಷ್ಮಮ್ಮ ಎಲ್ಲಾ ಕಂಪೆನಿಗಳಿಂದಲೂ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. <br /> <br /> ಪಣಂಬೂರು ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಜವಾಬ್ದಾರಿ ಹೊತ್ತಿರುವ ಯತೀಶ್ ಬೈಕಂಪಾಡಿ ಅವರೂ ಈ ಟೆಂಡರ್ಗೆ ಅರ್ಜಿ ಹಾಕಿದ್ದು, ಆದಿಲಕ್ಷ್ಮಮ್ಮ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ. ಯತೀಶ್ ಬೈಕಂಪಾಡಿ ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚದ ಹಣ ಪಡೆಯಲು ಪಣಂಬೂರು ಬೀಚ್ಗೆ ಆಗಮಿಸಿದ್ದ ಆದಿಲಕ್ಷ್ಮಮ್ಮ ರೂ. 5 ಸಾವಿರ ಲಂಚ ಸ್ವೀಕರಿಸುವಾಗಲೇ ಪೊಲೀಸರು ಬಂಧಿಸಿದರು.<br /> <br /> ಲೋಕಾಯುಕ್ತ ಎಸ್ಪಿ ಜಗಮಯ್ಯನವರ್, ಡಿವೈಎಸ್ಪಿ ಸದಾನಂದ ವರ್ಣೇಕರ್, ಇನ್ಸ್ಪೆಕ್ಟರ್ ಉದಯನಾಯ್ಕ, ಸಿಬ್ಬಂದಿ ದಿಲೀಪ್ ಲಕ್ಷ್ಮೀಕಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಸದ್ಯ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಸಹಾಯಕ ನಿರ್ದೇಶಕಿಯನ್ನು ಶುಕ್ರವಾರ ವೈದ್ಯಕೀಯ ತಪಾಸಣೆಗೆ ಒಳಪಡಿಸುವ ನಿರೀಕ್ಷೆ ಇದೆ.<br /> <br /> <strong>2 ತಿಂಗಳಲ್ಲಿ ಬಡ್ತಿ ಭಾಗ್ಯವಿತ್ತು!</strong><br /> ಲೋಕಾಯುಕ್ತ ಬಲೆಗೆ ಬಿದ್ದ ಆದಿಲಕ್ಷ್ಮಮ್ಮ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿಯಾಗಿದ್ದು, ಪ್ರಸ್ತುತ ಹಾಸನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರಭಾರವನ್ನೂ ಇವರಿಗೆ ವಹಿಸಲಾಗಿದ್ದು, ಮಂಗಳೂರಿನಲ್ಲಿ ಸಹಾಯಕ ನಿರ್ದೇಶಕರ ಹುದ್ದೆ ರದ್ದಾಗಿರುವುದರಿಂದ ಆದಿಲಕ್ಷ್ಮಮ್ಮ ಇಲ್ಲಿಗೆ ಬಂದು ಹೋಗುತ್ತಿದ್ದರು. <br /> <br /> ನಿವೃತ್ತಿಯಂಚಿಗೆ ಬಂದಿರುವ ಆದಿಲಕ್ಷ್ಮಮ್ಮ, ಇನ್ನು 2-3 ತಿಂಗಳಲ್ಲಿ ಉಪ ನಿರ್ದೇಶಕಿಯಾಗಿ ಬಡ್ತಿ ಹೊಂದುವ ಅವಕಾಶಕ್ಕಾಗಿ ಕಾಯುತ್ತಿದ್ದರು ಎಂದು ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುರತ್ಕಲ್: </strong>ಟೆಂಡರ್ ಪ್ರಕ್ರಿಯೆ ಸಂಬಂಧ ಅರ್ಜಿದಾರರಿಂದ ಲಂಚ ಸ್ವೀಕರಿಸುತ್ತಿದ್ದಾಗಲೇ ರಾಜ್ಯ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಆದಿಲಕ್ಷ್ಮಮ್ಮ ಅವರನ್ನು ಲೋಕಾಯುಕ್ತ ಪೊಲೀಸರು ಪಣಂಬೂರು ಬೀಚ್ನಲ್ಲಿ ಗುರುವಾರ ಬಂಧಿಸಿದರು. ತಣ್ಣೀರುಬಾವಿ ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಟೆಂಡರ್ ಕರೆಯಲಾಗಿತ್ತು. ಒಟ್ಟು 7 ಕಂಪೆನಿಗಳು ಟೆಂಡರ್ ಹಾಕಿದ್ದು, ಆದಿಲಕ್ಷ್ಮಮ್ಮ ಎಲ್ಲಾ ಕಂಪೆನಿಗಳಿಂದಲೂ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. <br /> <br /> ಪಣಂಬೂರು ಬೀಚ್ ಪ್ರವಾಸೋದ್ಯಮ ಅಭಿವೃದ್ಧಿ ಜವಾಬ್ದಾರಿ ಹೊತ್ತಿರುವ ಯತೀಶ್ ಬೈಕಂಪಾಡಿ ಅವರೂ ಈ ಟೆಂಡರ್ಗೆ ಅರ್ಜಿ ಹಾಕಿದ್ದು, ಆದಿಲಕ್ಷ್ಮಮ್ಮ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ದೂರಲಾಗಿದೆ. ಯತೀಶ್ ಬೈಕಂಪಾಡಿ ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚದ ಹಣ ಪಡೆಯಲು ಪಣಂಬೂರು ಬೀಚ್ಗೆ ಆಗಮಿಸಿದ್ದ ಆದಿಲಕ್ಷ್ಮಮ್ಮ ರೂ. 5 ಸಾವಿರ ಲಂಚ ಸ್ವೀಕರಿಸುವಾಗಲೇ ಪೊಲೀಸರು ಬಂಧಿಸಿದರು.<br /> <br /> ಲೋಕಾಯುಕ್ತ ಎಸ್ಪಿ ಜಗಮಯ್ಯನವರ್, ಡಿವೈಎಸ್ಪಿ ಸದಾನಂದ ವರ್ಣೇಕರ್, ಇನ್ಸ್ಪೆಕ್ಟರ್ ಉದಯನಾಯ್ಕ, ಸಿಬ್ಬಂದಿ ದಿಲೀಪ್ ಲಕ್ಷ್ಮೀಕಾಂತ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಸದ್ಯ ಲೋಕಾಯುಕ್ತ ಪೊಲೀಸರ ವಶದಲ್ಲಿರುವ ಸಹಾಯಕ ನಿರ್ದೇಶಕಿಯನ್ನು ಶುಕ್ರವಾರ ವೈದ್ಯಕೀಯ ತಪಾಸಣೆಗೆ ಒಳಪಡಿಸುವ ನಿರೀಕ್ಷೆ ಇದೆ.<br /> <br /> <strong>2 ತಿಂಗಳಲ್ಲಿ ಬಡ್ತಿ ಭಾಗ್ಯವಿತ್ತು!</strong><br /> ಲೋಕಾಯುಕ್ತ ಬಲೆಗೆ ಬಿದ್ದ ಆದಿಲಕ್ಷ್ಮಮ್ಮ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿಯಾಗಿದ್ದು, ಪ್ರಸ್ತುತ ಹಾಸನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ರಭಾರವನ್ನೂ ಇವರಿಗೆ ವಹಿಸಲಾಗಿದ್ದು, ಮಂಗಳೂರಿನಲ್ಲಿ ಸಹಾಯಕ ನಿರ್ದೇಶಕರ ಹುದ್ದೆ ರದ್ದಾಗಿರುವುದರಿಂದ ಆದಿಲಕ್ಷ್ಮಮ್ಮ ಇಲ್ಲಿಗೆ ಬಂದು ಹೋಗುತ್ತಿದ್ದರು. <br /> <br /> ನಿವೃತ್ತಿಯಂಚಿಗೆ ಬಂದಿರುವ ಆದಿಲಕ್ಷ್ಮಮ್ಮ, ಇನ್ನು 2-3 ತಿಂಗಳಲ್ಲಿ ಉಪ ನಿರ್ದೇಶಕಿಯಾಗಿ ಬಡ್ತಿ ಹೊಂದುವ ಅವಕಾಶಕ್ಕಾಗಿ ಕಾಯುತ್ತಿದ್ದರು ಎಂದು ಇಲಾಖೆ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>