<p><strong>ಬ್ರಹ್ಮಾವರ:</strong> ಮುಖ್ಯಮಂತ್ರಿಗಳ ಅನುದಾನದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ.55ಲಕ್ಷ ಹಾರಾಡಿ ಪಂಚಾಯಿತಿಗೆ ದೊರೆತಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.<br /> <br /> ಹಾರಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅವರು ವಿವಿಧ ಯೋಜನೆಯ ಫಲಾನುಭವಿ ಗಳಿಗೆ ಚೆಕ್, ಬಾಂಡ್ಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಈ ವರ್ಷ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ 30ಕಿ.ಮೀ ರಸ್ತೆ ಅಭಿವೃದ್ಧಿಗೆ ಅನುದಾನ ದೊರೆತಿದೆ. ಸಕ್ಕರೆ ಕಾರ್ಖಾನೆಯಿಂದ ಹೊನ್ನಾಳಕ್ಕೆ ಹೋಗುವ ಹೊಂಡಮಯ ರಸ್ತೆಯನ್ನು ಇನ್ನೆರಡು ತಿಂಗಳಲ್ಲಿ ದುರಸ್ತಿ ಮಾಡಲಾಗುವುದು. ಗಾಂಧಿನಗರದಲ್ಲಿ ವಾಸವಾಗಿರುವ 50ಕ್ಕೂ ಹೆಚ್ಚು ಕುಟುಂಬಗಳಿಗೆ ಕೂಡಲೇ ಹಕ್ಕು ಪತ್ರ ನೀಡಲು ಪ್ರಯತ್ನಿಸಲಾಗುವುದು ಎಂದರು.<br /> <br /> ಹಾರಾಡಿ ಗ್ರಾ.ಪಂ ಅಧ್ಯಕ್ಷೆ ಸುಜಾತ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥಯ್ಯ, ಜಿ.ಪಂ.ಪ್ರಭಾರ ಅಧ್ಯಕ್ಷ ಉಪೇಂದ್ರ ನಾಯಕ್, ಜಿ.ಪಂ. ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ತಾ.ಪಂ. ಸದಸ್ಯ ಕೆಶವ ಕುಮಾರ್, ತಹಶೀಲ್ದಾರ್ ಶಂಕರ್ ಶೆಟ್ಟಿ, ಬ್ರಹ್ಮಾವರದ ಎಸ್.ಐ. ಡಿ.ಟಿ.ಪ್ರಭು, ಮೆಸ್ಕಾಂನ ಪ್ರಾಣೇಶ್, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಸದಾನಂದ ನಾಯಕ್ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ:</strong> ಮುಖ್ಯಮಂತ್ರಿಗಳ ಅನುದಾನದಿಂದ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ರೂ.55ಲಕ್ಷ ಹಾರಾಡಿ ಪಂಚಾಯಿತಿಗೆ ದೊರೆತಿದೆ ಎಂದು ಶಾಸಕ ಕೆ.ರಘುಪತಿ ಭಟ್ ತಿಳಿಸಿದರು.<br /> <br /> ಹಾರಾಡಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಅವರು ವಿವಿಧ ಯೋಜನೆಯ ಫಲಾನುಭವಿ ಗಳಿಗೆ ಚೆಕ್, ಬಾಂಡ್ಗಳನ್ನು ವಿತರಿಸಿ ಅವರು ಮಾತನಾಡಿದರು.<br /> <br /> ನಮ್ಮ ಗ್ರಾಮ ನಮ್ಮ ರಸ್ತೆ ಯೋಜನೆಯಡಿ ಈ ವರ್ಷ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ 30ಕಿ.ಮೀ ರಸ್ತೆ ಅಭಿವೃದ್ಧಿಗೆ ಅನುದಾನ ದೊರೆತಿದೆ. ಸಕ್ಕರೆ ಕಾರ್ಖಾನೆಯಿಂದ ಹೊನ್ನಾಳಕ್ಕೆ ಹೋಗುವ ಹೊಂಡಮಯ ರಸ್ತೆಯನ್ನು ಇನ್ನೆರಡು ತಿಂಗಳಲ್ಲಿ ದುರಸ್ತಿ ಮಾಡಲಾಗುವುದು. ಗಾಂಧಿನಗರದಲ್ಲಿ ವಾಸವಾಗಿರುವ 50ಕ್ಕೂ ಹೆಚ್ಚು ಕುಟುಂಬಗಳಿಗೆ ಕೂಡಲೇ ಹಕ್ಕು ಪತ್ರ ನೀಡಲು ಪ್ರಯತ್ನಿಸಲಾಗುವುದು ಎಂದರು.<br /> <br /> ಹಾರಾಡಿ ಗ್ರಾ.ಪಂ ಅಧ್ಯಕ್ಷೆ ಸುಜಾತ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮಂಜುನಾಥಯ್ಯ, ಜಿ.ಪಂ.ಪ್ರಭಾರ ಅಧ್ಯಕ್ಷ ಉಪೇಂದ್ರ ನಾಯಕ್, ಜಿ.ಪಂ. ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ತಾ.ಪಂ. ಸದಸ್ಯ ಕೆಶವ ಕುಮಾರ್, ತಹಶೀಲ್ದಾರ್ ಶಂಕರ್ ಶೆಟ್ಟಿ, ಬ್ರಹ್ಮಾವರದ ಎಸ್.ಐ. ಡಿ.ಟಿ.ಪ್ರಭು, ಮೆಸ್ಕಾಂನ ಪ್ರಾಣೇಶ್, ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಸದಾನಂದ ನಾಯಕ್ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>