<p><strong>ಉಡುಪಿ: </strong>ಚುನಾವಣಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಯಾವುದೇ ಕರಪತ್ರ ಪೋಸ್ಟರ್ ಇತ್ಯಾದಿಗಳನ್ನು ಪ್ರಕಟಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಮುದ್ದುಮೋಹನ್ ಹೇಳಿದರು.<br /> <br /> ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲೆಯ ಎಲ್ಲಾ ಪ್ರಿಂಟರ್ಸ್ ಹಾಗೂ ಪ್ರಕಾಶಕರ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿರುವ ಹಿನ್ನಲೆಯಲ್ಲಿ ಕರಪತ್ರ, ಪೋಸ್ಟರ್ ಇತ್ಯಾದಿಗಳ ಮುದ್ರಣಕ್ಕೆ ಪೂರ್ವಾನುಮತಿ ಅಗತ್ಯ. ಪ್ರತಿಯೊಂದು ಕರಪತ್ರಗಳ ಕೆಳಭಾಗದಲ್ಲಿ ಮುದ್ರಕರ ವಿವರ, ಪ್ರಮಾಣ ಹಾಗೂ ದಿನಾಂಕವನ್ನು ತಪ್ಪದೆ ನಮೂದಿಸಲು ಅವರು ಸೂಚಿಸಿದರು.<br /> <br /> ಮುದ್ರಿಸಿ ಪ್ರಕಟಿಸಿದ ಪ್ರತಿಯೊಂದು ಕರಪತ್ರ, ವಗೈರೆಯ ವಿವರವನ್ನು ಅನುಬಂಧ-ಬಿ ಯಲ್ಲಿ ಘೋಷಣಾ ಪತ್ರದೊಂದಿಗೆ ಪ್ರಕಟಿಸಿರುವ ಕರಪತ್ರ ವಗೈರೆಯ ೪ ಪ್ರತಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಉಡುಪಿ ಅವರಿಗೆ ಮದ್ರಿಸಲ್ಪಟ್ಟ ೩ ದಿನಗಳೊಳಗೆ ಸಲ್ಲಿಸಬೇಕು. ಈ ಸೂಚನೆಯನ್ನು ಪಾಲಿಸದೆ ಇದ್ದಲ್ಲಿ ಅಂತಹ ತಪ್ಪಿತಸ್ಥ ಪ್ರಿಂಟರ್–ಪ್ರಕಾಶಕರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ೧೯೫೧ ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.<br /> <br /> <strong>ಖರ್ಚು ವೆಚ್ಚ ನಿಗಾಕ್ಕೆ ಆದ್ಯತೆ ನೀಡಿ: ಪೊನ್ನುರಾಜ್</strong><br /> ಚುನಾವಣೆ ವೇಳೆ ಅಭ್ಯರ್ಥಿಗಳ ಖರ್ಚು ವೆಚ್ಚ ಸಂಬಂಧ ಹೆಚ್ಚಿನ ನಿಗಾವಹಿಸಬೇಕು ಹಾಗೂ ಇದಕ್ಕಾಗಿ ನೇಮಿಸಿರುವ ತಂಡಗಳು ನಿಗಾ ವಹಿಸಬೇಕು ಎಂದು ಚುನಾವಣಾ ಆಯೋಗದ ಖರ್ಚು ವೆಚ್ಚ ವಿಭಾಗದ ವಿಶೇಷಾಧಿಕಾರಿ ಪೊನ್ನುರಾಜ್ ಹೇಳಿದರು.<br /> <br /> ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸ್ವೀಪ್ ಅಧ್ಯಕ್ಷರಾದ ಸಿಇಒ ಅವರೊಂದಿಗೆ ನಡೆಸಿದ ವಿಡಿಯೋ ಕಾನ್ಪರೆನ್ಸ್ನಲ್ಲಿ ನಿರ್ದೇಶನ ನೀಡಿದರು.<br /> <br /> ಖರ್ಚು ವೆಚ್ಚ ವಿವರವನ್ನು ಪ್ರತಿದಿನ ನಿರ್ವಹಿಸಿ ನಿಗದಿತ ನಮೂನೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಶ್ಯಾಡೋ ರಿಜಿಸ್ಟರ್ ನಿರ್ವಹಿಸುವ ರೀತಿಯನ್ನು ವಿವರಿಸಿದ ಅವರು, ಖರ್ಚು ವೆಚ್ಚ ನಿಗಾದ ಅಗತ್ಯವನ್ನು ಅಧಿಕಾರಿಗಳು ಮನಗಂಡು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಚುನಾವಣಾಧಿಕಾರಿಗಳ ಪೂರ್ವಾನುಮತಿ ಇಲ್ಲದೆ ಯಾವುದೇ ಕರಪತ್ರ ಪೋಸ್ಟರ್ ಇತ್ಯಾದಿಗಳನ್ನು ಪ್ರಕಟಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ಮುದ್ದುಮೋಹನ್ ಹೇಳಿದರು.<br /> <br /> ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲೆಯ ಎಲ್ಲಾ ಪ್ರಿಂಟರ್ಸ್ ಹಾಗೂ ಪ್ರಕಾಶಕರ ಸಭೆಯಲ್ಲಿ ಅವರು ಮಾತನಾಡಿದರು.<br /> <br /> ಭಾರತ ಚುನಾವಣಾ ಆಯೋಗವು ಲೋಕಸಭೆಗೆ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಿರುವ ಹಿನ್ನಲೆಯಲ್ಲಿ ಕರಪತ್ರ, ಪೋಸ್ಟರ್ ಇತ್ಯಾದಿಗಳ ಮುದ್ರಣಕ್ಕೆ ಪೂರ್ವಾನುಮತಿ ಅಗತ್ಯ. ಪ್ರತಿಯೊಂದು ಕರಪತ್ರಗಳ ಕೆಳಭಾಗದಲ್ಲಿ ಮುದ್ರಕರ ವಿವರ, ಪ್ರಮಾಣ ಹಾಗೂ ದಿನಾಂಕವನ್ನು ತಪ್ಪದೆ ನಮೂದಿಸಲು ಅವರು ಸೂಚಿಸಿದರು.<br /> <br /> ಮುದ್ರಿಸಿ ಪ್ರಕಟಿಸಿದ ಪ್ರತಿಯೊಂದು ಕರಪತ್ರ, ವಗೈರೆಯ ವಿವರವನ್ನು ಅನುಬಂಧ-ಬಿ ಯಲ್ಲಿ ಘೋಷಣಾ ಪತ್ರದೊಂದಿಗೆ ಪ್ರಕಟಿಸಿರುವ ಕರಪತ್ರ ವಗೈರೆಯ ೪ ಪ್ರತಿಗಳೊಂದಿಗೆ ಜಿಲ್ಲಾ ಚುನಾವಣಾಧಿಕಾರಿ ಉಡುಪಿ ಅವರಿಗೆ ಮದ್ರಿಸಲ್ಪಟ್ಟ ೩ ದಿನಗಳೊಳಗೆ ಸಲ್ಲಿಸಬೇಕು. ಈ ಸೂಚನೆಯನ್ನು ಪಾಲಿಸದೆ ಇದ್ದಲ್ಲಿ ಅಂತಹ ತಪ್ಪಿತಸ್ಥ ಪ್ರಿಂಟರ್–ಪ್ರಕಾಶಕರ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ೧೯೫೧ ರ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.<br /> <br /> <strong>ಖರ್ಚು ವೆಚ್ಚ ನಿಗಾಕ್ಕೆ ಆದ್ಯತೆ ನೀಡಿ: ಪೊನ್ನುರಾಜ್</strong><br /> ಚುನಾವಣೆ ವೇಳೆ ಅಭ್ಯರ್ಥಿಗಳ ಖರ್ಚು ವೆಚ್ಚ ಸಂಬಂಧ ಹೆಚ್ಚಿನ ನಿಗಾವಹಿಸಬೇಕು ಹಾಗೂ ಇದಕ್ಕಾಗಿ ನೇಮಿಸಿರುವ ತಂಡಗಳು ನಿಗಾ ವಹಿಸಬೇಕು ಎಂದು ಚುನಾವಣಾ ಆಯೋಗದ ಖರ್ಚು ವೆಚ್ಚ ವಿಭಾಗದ ವಿಶೇಷಾಧಿಕಾರಿ ಪೊನ್ನುರಾಜ್ ಹೇಳಿದರು.<br /> <br /> ಜಿಲ್ಲೆಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಸ್ವೀಪ್ ಅಧ್ಯಕ್ಷರಾದ ಸಿಇಒ ಅವರೊಂದಿಗೆ ನಡೆಸಿದ ವಿಡಿಯೋ ಕಾನ್ಪರೆನ್ಸ್ನಲ್ಲಿ ನಿರ್ದೇಶನ ನೀಡಿದರು.<br /> <br /> ಖರ್ಚು ವೆಚ್ಚ ವಿವರವನ್ನು ಪ್ರತಿದಿನ ನಿರ್ವಹಿಸಿ ನಿಗದಿತ ನಮೂನೆಯಲ್ಲಿ ಚುನಾವಣಾ ಆಯೋಗಕ್ಕೆ ಸಲ್ಲಿಸಬೇಕು. ಶ್ಯಾಡೋ ರಿಜಿಸ್ಟರ್ ನಿರ್ವಹಿಸುವ ರೀತಿಯನ್ನು ವಿವರಿಸಿದ ಅವರು, ಖರ್ಚು ವೆಚ್ಚ ನಿಗಾದ ಅಗತ್ಯವನ್ನು ಅಧಿಕಾರಿಗಳು ಮನಗಂಡು ಉತ್ತಮವಾಗಿ ಕಾರ್ಯನಿರ್ವಹಿಸಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>