ಬೈಂದೂರು: ಮಕ್ಕಳು ದೇಶದ ಬಹುದೊಡ್ಡ ಆಸ್ತಿಯಾಗಿರುವುದರಿಂದ ಅವರ ಪೋಷಣೆ, ಬೆಳವಣಿಗೆ, ಶಿಕ್ಷಣ, ಆರೋಗ್ಯಕ್ಕೆ ಹೆಚ್ಚು ಮಹತ್ವ ನೀಡಬೇಕು. ಅವರಲ್ಲಿ ಸದ್ವಿಚಾರ, ಸದ್ವಿವೇಕ, ಹೊಣೆಗಾರಿಕೆ ಬೆಳೆಯುವಂತೆ ನೋಡಿಕೊಳ್ಳಬೇಕು’ ಎಂದು ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್. ರಾಜು ಪೂಜಾರಿ ಹೇಳಿದರು.
ಇಲ್ಲಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಮಕ್ಕಳ ದಿನದ ನಿಮಿತ್ತ ಏರ್ಪಡಿಸಿದ್ದ ಮಕ್ಕಳ ಸಾಮೂಹಿಕ ಹುಟ್ಟುಹಬ್ಬದಲ್ಲಿ ಅವರು ಮಾತನಾಡಿದರು.
ಶಾಲೆಯ ಅತ್ಯಂತ ಕಿರಿಯ ವಿದ್ಯಾರ್ಥಿ ಪ್ರಕೃತಿ ಶೆಟ್ಟಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಶ್ಯಾನುಭಾಗ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಜನಾರ್ದನ ದೇವಾಡಿಗ, ಸುಮನಾ, ತಿಮ್ಮಪ್ಪ ಗಾಣಿಗ, ಪತ್ರಕರ್ತರಾದ ನರಸಿಂಹ ನಾಯಕ್, ಎಸ್. ಅರುಣಕುಮಾರ, ರೂಪ್ಲಾ ಕಾಮತ್್ ಇದ್ದರು.