ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜಾಗತಿಕ ಲಿಂಗಾಯತ ಮಹಾಸಭಾ ವತಿಯಿಂದ ಏಪ್ರಿಲ್ 7ರಂದು ನಡೆದಿದ್ದ ಮಠಾಧೀಶರ ಸಭೆಯಲ್ಲಿ ಈ ರೀತಿ ಹೇಳಿದ್ದೆ. ಜೊತೆಗೆ, ಸಿದ್ದರಾಮಯ್ಯ ಅವರನ್ನು ಬೆಂಬಲಿಸುವಂತೆ ಇತರ ಮಠಾಧೀಶರಿಗೂ ಕರೆ ನೀಡಿದ್ದೆ. ಈ ಹೇಳಿಕೆಯನ್ನು ವಾಪಸ್ ಪಡೆಯುವಂತೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಮಹಾಸಭಾಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವರದೇ ಆದ ಅಭಿವ್ಯಕ್ತಿ ಸ್ವಾತಂತ್ರ್ಯ ಇದೆ. ಅವರದ್ದು ಹಾಸ್ಯಾಸ್ಪದ ಹೇಳಿಕೆ. ರಾಜೀನಾಮೆ ಕೊಟ್ಟರೆ ಅವರಿಗೇ ನಷ್ಟ. ನನ್ನ ಹೇಳಿಕೆ ಬದಲಿಸಲು ಸಾಧ್ಯವಿಲ್ಲ’ ಎಂದರು.