<p><strong>ಹೊನ್ನಾವರ:</strong> ಆದಾಯ ತೆರಿಗೆ ಪಾವತಿಸಿದ ನಂತರದಲ್ಲಿ ಇಲ್ಲಿಯ ಹೊನ್ನಾವರ ಅರ್ಬನ್ ಬ್ಯಾಂಕ್ ₹ 1.21 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಘವ ಬಾಳೇರಿ ತಿಳಿಸಿದರು.</p>.<p>ವಾರ್ಷಿಕ ಸಭೆಯಲ್ಲಿ ಬ್ಯಾಂಕಿನ ಆರ್ಥಿಕ ಸ್ಥಿತಿ- ಗತಿಯ ಕುರಿತು ಅವರು ಮಾತನಾಡಿದರು. ಠೇವು ಸಂಗ್ರಹಣೆ ₹ 203 ಕೋಟಿಗೆ ತಲುಪಿದೆ. ₹ 121 ಕೋಟಿ ಸಾಲ ಮುಂಗಡ ನೀಡಲಾಗಿದೆ. ₹ 20 ಕೋಟಿ ಷೇರು ಭಂಡವಾಳ ಮತ್ತು ಸ್ವಂತ ನಿಧಿ ಇದೆ. ದುಡಿಯುವ ಬಂಡವಾಳ ₹ 223 ಕೋಟಿಗೆ ಏರಿಕೆಯಾಗಿದೆ. ₹91 ಕೋಟಿಯನ್ನು ಕೇಂದ್ರ ಸರ್ಕಾರದ ಸಾಲಪತ್ರ ಹಾಗೂ ವಿವಿಧ ಬ್ಯಾಂಕ್ಗಳಲ್ಲಿ ತೊಡಗಿಸಿರುವುದು ಬ್ಯಾಂಕಿನ ಆರ್ಥಿಕ ಸ್ಥಿರತೆಯನ್ನು ದೃಢೀಕರಿಸಿದೆ ಎಂದು ಅವರು ಹೇಳಿದರು.</p>.<p>24,493 ಷೇರು ಸದಸ್ಯರನ್ನು ಹೊಂದಿರುವ ಬ್ಯಾಂಕ್ ಒಂದೇ ವರ್ಷದಲ್ಲಿ ₹ 324 ಕೋಟಿ ವ್ಯವಹಾರ ನಡೆಸಿದೆ. ಪ್ರಸಕ್ತ ಸಾಲಿನ ಲೆಕ್ಕ ಪರಿಶೋಧನೆಯಲ್ಲೂ ಬ್ಯಾಂಕಿಗೆ ಅ ವರ್ಗ ಪ್ರಾಪ್ತವಾಗಿದ್ದು, ಷೇರು ಸದಸ್ಯರಿಗೆ ಪ್ರತಿಶತ 7 ಡಿವಿಡೆಂಡ್ ಘೋಷಿಸಲಾಗಿದೆ. ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು ಆಕರ್ಷಕ ದರದಲ್ಲಿ ಸಾಲ ಸೇರಿದಂತೆ ವಿವಿಧ ಗ್ರಾಹಕ ಸ್ನೇಹಿ ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಮೊಬೈಲ್ ಬ್ಯಾಂಕಿಂಗ್ ಸೇವೆಗೆ ರಿಸರ್ವ್ ಬ್ಯಾಂಕ್ನಿಂದ ಅನುಮತಿ ಪಡೆಯಲಾಗಿದ್ದು, ಇದು ಶೀಘ್ರ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾವರ:</strong> ಆದಾಯ ತೆರಿಗೆ ಪಾವತಿಸಿದ ನಂತರದಲ್ಲಿ ಇಲ್ಲಿಯ ಹೊನ್ನಾವರ ಅರ್ಬನ್ ಬ್ಯಾಂಕ್ ₹ 1.21 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷ ರಾಘವ ಬಾಳೇರಿ ತಿಳಿಸಿದರು.</p>.<p>ವಾರ್ಷಿಕ ಸಭೆಯಲ್ಲಿ ಬ್ಯಾಂಕಿನ ಆರ್ಥಿಕ ಸ್ಥಿತಿ- ಗತಿಯ ಕುರಿತು ಅವರು ಮಾತನಾಡಿದರು. ಠೇವು ಸಂಗ್ರಹಣೆ ₹ 203 ಕೋಟಿಗೆ ತಲುಪಿದೆ. ₹ 121 ಕೋಟಿ ಸಾಲ ಮುಂಗಡ ನೀಡಲಾಗಿದೆ. ₹ 20 ಕೋಟಿ ಷೇರು ಭಂಡವಾಳ ಮತ್ತು ಸ್ವಂತ ನಿಧಿ ಇದೆ. ದುಡಿಯುವ ಬಂಡವಾಳ ₹ 223 ಕೋಟಿಗೆ ಏರಿಕೆಯಾಗಿದೆ. ₹91 ಕೋಟಿಯನ್ನು ಕೇಂದ್ರ ಸರ್ಕಾರದ ಸಾಲಪತ್ರ ಹಾಗೂ ವಿವಿಧ ಬ್ಯಾಂಕ್ಗಳಲ್ಲಿ ತೊಡಗಿಸಿರುವುದು ಬ್ಯಾಂಕಿನ ಆರ್ಥಿಕ ಸ್ಥಿರತೆಯನ್ನು ದೃಢೀಕರಿಸಿದೆ ಎಂದು ಅವರು ಹೇಳಿದರು.</p>.<p>24,493 ಷೇರು ಸದಸ್ಯರನ್ನು ಹೊಂದಿರುವ ಬ್ಯಾಂಕ್ ಒಂದೇ ವರ್ಷದಲ್ಲಿ ₹ 324 ಕೋಟಿ ವ್ಯವಹಾರ ನಡೆಸಿದೆ. ಪ್ರಸಕ್ತ ಸಾಲಿನ ಲೆಕ್ಕ ಪರಿಶೋಧನೆಯಲ್ಲೂ ಬ್ಯಾಂಕಿಗೆ ಅ ವರ್ಗ ಪ್ರಾಪ್ತವಾಗಿದ್ದು, ಷೇರು ಸದಸ್ಯರಿಗೆ ಪ್ರತಿಶತ 7 ಡಿವಿಡೆಂಡ್ ಘೋಷಿಸಲಾಗಿದೆ. ಕೋರ್ ಬ್ಯಾಂಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು ಆಕರ್ಷಕ ದರದಲ್ಲಿ ಸಾಲ ಸೇರಿದಂತೆ ವಿವಿಧ ಗ್ರಾಹಕ ಸ್ನೇಹಿ ಯೋಜನೆಗಳನ್ನು ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.</p>.<p>ಮೊಬೈಲ್ ಬ್ಯಾಂಕಿಂಗ್ ಸೇವೆಗೆ ರಿಸರ್ವ್ ಬ್ಯಾಂಕ್ನಿಂದ ಅನುಮತಿ ಪಡೆಯಲಾಗಿದ್ದು, ಇದು ಶೀಘ್ರ ಕಾರ್ಯರೂಪಕ್ಕೆ ಬರಲಿದೆ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>