ಬಸ್ಗಳಲ್ಲಿ ಪ್ರಯಾಣಿಕರ ನಡುವೆ ಅಂತರ ಕಾಯ್ದುಕೊಳ್ಳುವ ಸಲುವಾಗಿ ತಲಾ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿತ್ತು.ಬೀದರ್, ರಾಯಚೂರು, ಚಿಕ್ಕಬಳ್ಳಾಪುರ, ಸುರಪುರ, ಸಿಂದಗಿ, ಕುಷ್ಟಗಿ ಮುಂತಾದ ಪ್ರದೇಶಗಳ ಕಾರ್ಮಿಕರು ಕೂಲಿ ಕೆಲಸಕ್ಕಾಗಿ ಜಿಲ್ಲೆಗೆ ಬಂದಿದ್ದರು. ಆದರೆ, ಕೊರೊನಾ ವೈರಸ್ ಹರಡುವುದನ್ನು ತಡೆಯಲು ಸಲುವಾಗಿ ಲಾಕ್ಡೌನ್ ಘೋಷಣೆಯಾದ ಬಳಿಕ ತಮ್ಮ ಊರಿಗೆ ಮರಳಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಕೈಯಲ್ಲಿದ್ದ ಹಣವೂ ಖರ್ಚಾಗಿ ಅತಂತ್ರ ಸ್ಥಿತಿಯಲ್ಲಿದ್ದರು.