ಭಟ್ಕಳ: ಇಲ್ಲಿನ ಅರಬ್ಬಿ ಸಮುದ್ರದಲ್ಲಿ ಶುಕ್ರವಾರ ಮುಳುಗುತ್ತಿದ್ದ ದೋಣಿಯನ್ನು ಮತ್ತೊಂದು ದೋಣಿಯ ಮೀನುಗಾರರೇ ರಕ್ಷಿಸಿದ್ದಾರೆ. ಅದರಲ್ಲಿದ್ದ ಎಲ್ಲ 28 ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ.
ಸಮುದ್ರ ದಡದಿಂದ25 ನಾಟಿಕಲ್ ಮೈಲು (ಸುಮಾರು 46 ಕಿ.ಮೀ)ದೂರದ ಆಳ ಸಮುದ್ರದಲ್ಲಿ ಅವಘಡ ನಡೆದಿತ್ತು. ದೋಣಿಯುಕುಂದಾಪುರ ತಾಲ್ಲೂಕಿನ ಗಂಗೊಳ್ಳಿಯ ಮಧುಕರ ಪೂಜಾರಿ ಎಂಬುವವರದ್ದಾಗಿದೆ. ‘ಮೂಕಾಂಬಿಕಾ’ ಹೆಸರಿನ ಆ ದೋಣಿಯಲ್ಲಿ ಭಟ್ಕಳ ಬಂದರಿನಿಂದ ಮೀನುಗಾರಿಕೆಗೆ ಹೋಗಲಾಗಿತ್ತು.
ದೋಣಿಯ ತಳಭಾಗ ಒಡೆದುಮುಳುಗುವ ಹಂತ ತಲುಪಿದ್ದನ್ನುಸಮೀಪದಲ್ಲೇ ಇದ್ದ ಇತರ ದೋಣಿಗಳ ಮೀನುಗಾರರು ಗಮನಿಸಿದರು. ಕೂಡಲೇ ರಕ್ಷಣೆಗೆ ಧಾವಿಸಿ ಕಾರ್ಯಾಚರಣೆ ಮಾಡಿದರು. ಸಂಜೆಯ ವೇಳೆಗೆ ದೋಣಿಯನ್ನು ಎಳೆದು ದಡಕ್ಕೆ ತರಲಾಯಿತು ಎಂದುಸ್ಥಳೀಯರಾದ ಶಂಕರ ಮೊಗೇರ್ ಮಾಹಿತಿ ನೀಡಿದರು.