‘ಮೊದಲ ತಿಂಗಳಲ್ಲಿ ಗ್ರಾಮಗಳಲ್ಲಿ ಸಮೀಕ್ಷೆ ಮಾಡಿ, ಉತ್ಪಾದನೆಯಾಗುವ ತ್ಯಾಜ್ಯದ ಪ್ರಮಾಣವನ್ನು ಲೆಕ್ಕಾಚಾರ ಹಾಕಲಾಗುತ್ತದೆ. ಎರಡನೇ ತಿಂಗಳಲ್ಲಿ, ಉತ್ತಮವಾಗಿ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಬೇರೆ ಜಿಲ್ಲೆಗಳಿಗೆ ಗ್ರಾಮ ಪಂಚಾಯ್ತಿ ಹಾಗೂಜಿಲ್ಲಾ ಪಂಚಾಯ್ತಿಜನಪ್ರತಿನಿಧಿಗಳನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಗುತ್ತದೆ. ಮೂರನೇ ಹಂತದಲ್ಲಿ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ಬಳಿಕ, ₹ 20 ಲಕ್ಷ ಬಿಡುಗಡೆಯಾಗಲಿದೆ’ ಎಂದು ತಿಳಿಸಿದರು.