ನಗರದಲ್ಲಿ ಚರಂಡಿಗಳು ಉಕ್ಕಿ ರಸ್ತೆಯ ಮೇಲೆ ಹರಿಯುತ್ತಿದ್ದು, ನದಿಗಳಂತೆ ಗೋಚರಿಸುತ್ತಿವೆ. ಅಘನಾಶಿನಿ, ಬೇಡ್ತಿ, ವರದಾ, ಶಾಲ್ಮಲಾ ನದಿಗಳು ತುಂಬಿ ಹರಿಯುತ್ತಿವೆ. ತಾಲ್ಲೂಕಿನ ತಾರಗೋಡ ಸಮೀಪ ಬೃಹತ್ ಮರ ರಸ್ತೆಯ ಮೇಲೆ ಬಿದ್ದು ಒಂದು ತಾಸು ಕಾಲ ಶಿರಸಿ–ಯಲ್ಲಾಪುರ ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು.ಹುತ್ಗಾರ ಸಮೀಪ ವಿದ್ಯುತ್ ತಂತಿಯ ಮೇಲೆ ಅಕೇಶಿಯಾ ಮರ ಬಿದ್ದು ಮೂರು ವಿದ್ಯುತ್ ಕಂಬಗಳು ಮುರಿದಿವೆ. ವಿದ್ಯುತ್ ಇಲ್ಲದೇ ಅನೇಕ ಹಳ್ಳಿಗಳು ಕತ್ತಲಲ್ಲಿ ಮುಳುಗಿವೆ.