2,600ಕ್ಕೂ ಅಧಿಕ ಪ್ರವಾಸಿಗರಿದ್ದ ಹಡಗು ಫೆ.5ರಿಂದ19ರವರೆಗೆ ಸಮುದ್ರದಲ್ಲೇ ಬಾಕಿಯಾಗಿತ್ತು. ಇದೇವೇಳೆ, ಹಡಗಿನಲ್ಲಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿದ್ದುದು ಅಭಿಷೇಕ ಪಾಲಕರ ಆತಂಕಕ್ಕೆ ಕಾರಣವಾಗಿತ್ತು. ಅವರ ತಂದೆ ಬಾಲಕೃಷ್ಣ ಮಗರ್, ಪುತ್ರನನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಸಹಕರಿಸುವಂತೆ ಜಿಲ್ಲಾಡಳಿತದ ಮೂಲಕ ವಿದೇಶಾಂಗ ಸಚಿವಾಲಯಕ್ಕೆ ಪತ್ರ ಬರೆದು ಮನವಿ ಮಾಡಿದ್ದರು.