ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಸಹಾಯಕ ಎಂಜಿನಿಯರ್, ಜಿಲ್ಲಾ ನೊಂದಣಾಧಿಕಾರಿ ಮನೆ ಮೇಲೆ ಎಸಿಬಿ ದಾಳಿ

Last Updated 17 ಜೂನ್ 2022, 3:17 IST
ಅಕ್ಷರ ಗಾತ್ರ

ಕಾರವಾರ: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ, ಭ್ರಷ್ಟಾಚಾರ ನಿಗ್ರಹ ದಳದ (ಎ.ಸಿ.ಬಿ) ಅಧಿಕಾರಿಗಳು ನಗರದಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಎರಡು ಕಡೆ ದಾಳಿ ಮಾಡಿದ್ದಾರೆ.

ಕಾರವಾರದ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್ ರಾಜೀವ ನಾಯಕ ಅವರ ಮನೆಗೆ ದಾಳಿ ಮಾಡಿರುವ ಎ.ಸಿ.ಬಿ ಅಧಿಕಾರಿಗಳು, ದಾಖಲೆಗಳ ಪರಿಶೀಲನೆ ಮಾಡುತ್ತಿದ್ದಾರೆ. ನಗರದ ಎಂ.ಜಿ.ರಸ್ತೆಯ ಬೃಂದಾವನ ಅಪಾರ್ಟ್‌ಮೆಂಟ್‌ನಲ್ಲಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

ರಾಜೀವ ನಾಯಕ
ರಾಜೀವ ನಾಯಕ

ಅಂತೆಯೇ, ಜಿಲ್ಲಾ ನೊಂದಣಾಧಿಕಾರಿ ಶ್ರೀಧರ ಅವರ ಹಬ್ಬುವಾಡದ ಮನೆಯಲ್ಲಿ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಎರಡೂ ಕಡೆಯ ದಾಳಿಗಳಲ್ಲಿ ಸ್ಥಳೀಯ ಎ.ಸಿ.ಬಿ ಡಿ.ವೈ.ಎಸ್.ಪಿ ಪ್ರಕಾಶ್ ನೇತೃತ್ವದ ತಂಡ ಮತ್ತು ಹುಬ್ಬಳ್ಳಿಯ ಅಧಿಕಾರಿಗಳ ತಂಡ ಭಾಗವಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT