<p><strong>ಜೊಯಿಡಾ:</strong>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕಎಂಜಿನಿಯರ್ (ಎಇಇ)ಉದಯ ಛಬ್ಬಿ ಅವರ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿದರು. ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.</p>.<p>ಅವರುಅಕ್ರಮವಾಗಿಆಸ್ತಿ ಸಂಪಾದಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿಸಿಪಿಐ ವಿಶ್ವನಾಥ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದರು. ಇದೇರೀತಿ, ದಾಂಡೇಲಿಯಲ್ಲಿರುವ ಅವರ ಸಹೋದರನ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.</p>.<p>ಜೊಯಿಡಾದಲ್ಲಿ ಇಲಾಖೆಯ ವಸತಿ ಗೃಹವಿದ್ದು, ಅದಕ್ಕೆ ಬೀಗ ಹಾಕಲಾಗಿದೆ. ಅದನ್ನು ಕೂಡ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಉದಯಅವರು20 ವರ್ಷಗಳಿಂದ ಜೊಯಿಡಾ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಲ್ಲಿಲೋಕೋಪಯೋಗಿ ಮತ್ತು ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಆಗಿಕಾರ್ಯ ನಿರ್ವಹಿಸುತ್ತಿದ್ದಾರೆ. ಜೊಯಿಡಾ ಉಪವಿಭಾಗದಲ್ಲಿ2017ರಿಂದ ಎಇಇ ಆಗಿದ್ದಾರೆ.</p>.<p>ಎಸಿಬಿ ಅಧಿಕಾರಿಗಳು ಎರಡು ವಾರಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ ದಾಳಿ ಮಾಡಿದ ಎರಡನೇ ಪ್ರಕರಣವಿದಾಗಿದೆ. ಈ ಹಿಂದೆ ರಾಮನಗರದ ಕಂದಾಯ ನಿರೀಕ್ಷಕ ಎ.ವಿ.ಪಾಟೀಲ್ ಅವರು ಬಡ ಮಹಿಳೆಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೊಯಿಡಾ:</strong>ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕಎಂಜಿನಿಯರ್ (ಎಇಇ)ಉದಯ ಛಬ್ಬಿ ಅವರ ಕಚೇರಿಯ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ಬೆಳಿಗ್ಗೆ ದಾಳಿ ನಡೆಸಿದರು. ವಿವಿಧ ದಾಖಲೆಗಳನ್ನು ಪರಿಶೀಲಿಸಿದರು.</p>.<p>ಅವರುಅಕ್ರಮವಾಗಿಆಸ್ತಿ ಸಂಪಾದಿಸಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿಸಿಪಿಐ ವಿಶ್ವನಾಥ ನೇತೃತ್ವದಲ್ಲಿ ಅಧಿಕಾರಿಗಳು ಭೇಟಿ ನೀಡಿದರು. ಇದೇರೀತಿ, ದಾಂಡೇಲಿಯಲ್ಲಿರುವ ಅವರ ಸಹೋದರನ ನಿವಾಸದಲ್ಲೂ ದಾಖಲೆಗಳ ಪರಿಶೀಲನೆ ಮಾಡಲಾಗಿದೆ.</p>.<p>ಜೊಯಿಡಾದಲ್ಲಿ ಇಲಾಖೆಯ ವಸತಿ ಗೃಹವಿದ್ದು, ಅದಕ್ಕೆ ಬೀಗ ಹಾಕಲಾಗಿದೆ. ಅದನ್ನು ಕೂಡ ಪರಿಶೀಲನೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಉದಯಅವರು20 ವರ್ಷಗಳಿಂದ ಜೊಯಿಡಾ, ದಾಂಡೇಲಿ ಮತ್ತು ಹಳಿಯಾಳ ತಾಲ್ಲೂಕುಗಳಲ್ಲಿಲೋಕೋಪಯೋಗಿ ಮತ್ತು ಜಿಲ್ಲಾ ಪಂಚಾಯ್ತಿ ಎಂಜಿನಿಯರ್ ಆಗಿಕಾರ್ಯ ನಿರ್ವಹಿಸುತ್ತಿದ್ದಾರೆ. ಜೊಯಿಡಾ ಉಪವಿಭಾಗದಲ್ಲಿ2017ರಿಂದ ಎಇಇ ಆಗಿದ್ದಾರೆ.</p>.<p>ಎಸಿಬಿ ಅಧಿಕಾರಿಗಳು ಎರಡು ವಾರಗಳ ಅವಧಿಯಲ್ಲಿ ತಾಲ್ಲೂಕಿನಲ್ಲಿ ದಾಳಿ ಮಾಡಿದ ಎರಡನೇ ಪ್ರಕರಣವಿದಾಗಿದೆ. ಈ ಹಿಂದೆ ರಾಮನಗರದ ಕಂದಾಯ ನಿರೀಕ್ಷಕ ಎ.ವಿ.ಪಾಟೀಲ್ ಅವರು ಬಡ ಮಹಿಳೆಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>