ಅಂಕೋಲಾ:ತಾಲ್ಲೂಕಿನ ಹೊಸೂರುಸೇತುವೆಯ ಬಳಿ ಶುಕ್ರವಾರ ನಸುಕಿನಲ್ಲಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿವೆ. ಬಸ್ ನಲ್ಲಿದ್ದ ನಾಲ್ಕೈದು ಪ್ರಯಾಣಿಕರಿಗೆ ಗಾಯಗಳಾಗಿವೆ.
ಮಂಗಳೂರಿನಿಂದ ಮುಂಬೈಗೆ ಹೋಗುತ್ತಿದ್ದ ಸುಗಮ ಟೂರಿಸ್ಟ್ ಸಂಸ್ಥೆಯ ಬಸ್ ಹಾಗೂ ಮಹಾರಾಷ್ಟ್ರದಿಂದ ಮಂಗಳೂರಿನತ್ತ ಸಾಗುತ್ತಿದ್ದ ಲಾರಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಚಾಲಕರು ತಮ್ಮ ವಾಹನಗಳಲ್ಲೇ ಸಿಲುಕಿದ್ದು, ಪೊಲೀಸರು ಹಾಗೂ ಸ್ಥಳೀಯರು ಹರಸಾಹಸ ಮಾಡಿ ಹೊರತೆಗದರು.
ಗಾಯಾಳುಗಳನ್ನು ಕುಮಟಾ ಮತ್ತು ಅಂಕೋಲಾ ತಾಲ್ಲೂಕು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸ್ವಲ್ಪ ಹೊತ್ತು ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಅಂಕೋಲಾ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ವಾಹನ ಸಂಚಾರಕ್ಕೆ ಅನುವು ಮಾಡಿದರು.