ತಲಾಂದ ಮರಂಬಳ್ಳಿ ನಿವಾಸಿ ಮಂಜುನಾಥ ನಾಗಪ್ಪ ಗೊಂಡ(38) ಮೃತ. ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಈತನು ಎಂದಿನಂತೆ ಕೆಲಸಕ್ಕೆ ತೆರಳಲು ರಸ್ತೆ ದಾಟಲು ಬೈಕ್ ನಿಲ್ಲಿಸಿಕೊಂಡಿದ್ದಾಗ ಉಡುಪಿಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಟಿಪ್ಪರ್ ಗಾಡಿ ನಿಯಂತ್ರಣ ತಪ್ಪಿ ಎದುರಿನಲ್ಲಿ ಚಲಿಸುತ್ತಿದ್ದ ಕಾರಿಗೆ ಗುದ್ದಿ ಅಲ್ಲೇ ನಿಂತುಕೊಂಡಿದ್ದ ಬೈಕ್ಗೂ ಗುದ್ದಿದೆ. ಟಿಪ್ಪರ್ ಮೈಮೇಲೆ ಹರಿದ ಪರಿಣಾಮ ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯ ಬೈಕ್ ಸವಾರ್ ಮೃತಪಟ್ಟಿದ್ದಾರೆ.