ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಮತ್ತೆ ಭೂ ಕುಸಿತ- ಅಡಿಕೆ ತೋಟ ನಾಶ

Last Updated 24 ಜುಲೈ 2021, 16:11 IST
ಅಕ್ಷರ ಗಾತ್ರ

ಶಿರಸಿ: ತಾಲ್ಲೂಕಿನ ಮತ್ತಿಘಟ್ಟಾ ಕೆಳಗಿನಕೇರಿಯಲ್ಲಿ ವರ್ಷದಲ್ಲಿ ಎರಡನೆ ಬಾರಿಗೆ ಶನಿವಾರ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದೆ. ಒಂದು ಎಕರೆಯಷ್ಟು ಅಡಿಕೆ ತೋಟ ಸಂಪೂರ್ಣ ನಾಶವಾಗಿದೆ.

ಚಂದ್ರಶೇಖರ ಹೆಗಡೆ ಎಂಬುವವರಿಗೆ ಸೇರಿದ ತೋಟ ಇದಾಗಿದೆ. ವ್ಯಾಪಕ ಪ್ರಮಾಣದ ಮಳೆ ನೀರು ಹರಿದು ಬಂದ ಪರಿಣಾಮ ತೋಟ ಪ್ರದೇಶದಲ್ಲಿ ಇಂಗಿ ಕುಸಿತ ಸಂಭವಿಸಿರಬಹುದೆಂದು ಅಂದಾಜಿಸಲಾಗಿದೆ.

ಕಳೆದ ಫೆಬ್ರವರಿಯಲ್ಲಿ ಈಗ ಅವಘಡ ಸಂಭವಿಸಿದ ಜಾಗದ ಪಕ್ಕದಲ್ಲಿ ಮಧುಸೂಧನ ಹೆಗಡೆ ಎಂಬುವವರಿಗೆ ಸೇರಿದ್ದ ಒಂದು ಎಕರೆಯಷ್ಟು ತೋಟ ಕುಸಿದು ನಾಶವಾಗಿತ್ತು. ಪುನಃ ಕುಸಿತ ಉಂಟಾಗಿದ್ದು ಗ್ರಾಮಸ್ಥರನ್ನು ಆತಂಕಕ್ಕೆ ಈಡು ಮಾಡಿದೆ.

ಸ್ಥಳಕ್ಕೆ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಬಿ.ಪಿ.ಸತೀಶ್, ಹಿರಿಯ ಸಹಾಯಕ ನಿರ್ದೇಶಕ ಸತೀಶ ಹೆಗಡೆ, ದೇವನಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಮಧುಮತಿ ನಾಯ್ಕ, ಸದಸ್ಯೆ ಜಯಭಾರತಿ ಭಟ್ಟ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT