<p><strong>ಶಿರಸಿ:</strong> ಮುರೇಗಾರ ಜಲಪಾತದ ನೀರಿನಲ್ಲಿ ಸಿಲುಕಿ ಅಪಾಯದಲ್ಲಿದ್ದ ಮೂವರನ್ನು ರಕ್ಷಿಸಿದ್ದ ಹುಬ್ಬಳ್ಳಿಯ ಆದಿತ್ಯ ಮಲ್ಲಿಕಾರ್ಜುನ ಶಿವಳ್ಳಿ ಅವರಿಗೆ ಪೊಲೀಸ್ ಇಲಾಖೆ ಶುಕ್ರವಾರ ಪ್ರಶಂಸಾ ಪತ್ರ ನೀಡಿ ಗೌರವಿಸಿದೆ.</p>.<p>ಸಂಕ್ರಾಂತಿಯಂದು ತಾಲ್ಲೂಕಿನ ಮುರೇಗಾರ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಹುಬ್ಬಳ್ಳಿಯ ಇಂದುಧರ ಮುತ್ತಳ್ಳಿ, ಅಕ್ಷರ ಮುತ್ತಳ್ಳಿ ಹಾಗೂ ಬಳ್ಳಾರಿಯ ಬಸಪ್ಪ ಕೊಡಬಾಳ ಅವರು ಈಜಲು ಇಳಿದಾಗ ತೀವ್ರ ಅಪಾಯದಲ್ಲಿ ಸಿಲುಕಿ, ಸಾವು–ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಯುವಕ ಆದಿತ್ಯ, ಈ ಮೂವರನ್ನು ನೀರಿನ ಸೆಳೆತದಿಂದ ಹೊರ ತಂದು ಅವರ ಜೀವ ಉಳಿಸಿದ್ದಾರೆ.</p>.<p>ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಯುವಕನ ಸಾಹಸವನ್ನು ಮೆಚ್ಚಿದ್ದಾರೆ. ಅವರ ಸೂಚನೆಯಂತೆ ಗ್ರಾಮೀಣ ಠಾಣೆ ಪಿಎಸ್ಐ ನಂಜಾ ನಾಯ್ಕ, ಆದಿತ್ಯ ಅವರಿಗೆ ಪ್ರಶಂಸಾ ಪತ್ರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಸಿ:</strong> ಮುರೇಗಾರ ಜಲಪಾತದ ನೀರಿನಲ್ಲಿ ಸಿಲುಕಿ ಅಪಾಯದಲ್ಲಿದ್ದ ಮೂವರನ್ನು ರಕ್ಷಿಸಿದ್ದ ಹುಬ್ಬಳ್ಳಿಯ ಆದಿತ್ಯ ಮಲ್ಲಿಕಾರ್ಜುನ ಶಿವಳ್ಳಿ ಅವರಿಗೆ ಪೊಲೀಸ್ ಇಲಾಖೆ ಶುಕ್ರವಾರ ಪ್ರಶಂಸಾ ಪತ್ರ ನೀಡಿ ಗೌರವಿಸಿದೆ.</p>.<p>ಸಂಕ್ರಾಂತಿಯಂದು ತಾಲ್ಲೂಕಿನ ಮುರೇಗಾರ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದ ಹುಬ್ಬಳ್ಳಿಯ ಇಂದುಧರ ಮುತ್ತಳ್ಳಿ, ಅಕ್ಷರ ಮುತ್ತಳ್ಳಿ ಹಾಗೂ ಬಳ್ಳಾರಿಯ ಬಸಪ್ಪ ಕೊಡಬಾಳ ಅವರು ಈಜಲು ಇಳಿದಾಗ ತೀವ್ರ ಅಪಾಯದಲ್ಲಿ ಸಿಲುಕಿ, ಸಾವು–ಬದುಕಿನ ನಡುವೆ ಹೋರಾಡುತ್ತಿದ್ದರು. ಇದನ್ನು ಗಮನಿಸಿದ ಯುವಕ ಆದಿತ್ಯ, ಈ ಮೂವರನ್ನು ನೀರಿನ ಸೆಳೆತದಿಂದ ಹೊರ ತಂದು ಅವರ ಜೀವ ಉಳಿಸಿದ್ದಾರೆ.</p>.<p>ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಯುವಕನ ಸಾಹಸವನ್ನು ಮೆಚ್ಚಿದ್ದಾರೆ. ಅವರ ಸೂಚನೆಯಂತೆ ಗ್ರಾಮೀಣ ಠಾಣೆ ಪಿಎಸ್ಐ ನಂಜಾ ನಾಯ್ಕ, ಆದಿತ್ಯ ಅವರಿಗೆ ಪ್ರಶಂಸಾ ಪತ್ರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>