‘ಸ್ಥಳಕ್ಕೆ ಭೇಟಿ ನೀಡಿದ ಆಡಳಿತ ವರ್ಗದ ಅಧೀಕ್ಷಕ ಎಂಜಿನಿಯರ್ ಶ್ರೀಧರ ಕೋರಿ ಮತ್ತು ಇತರ ಉನ್ನತ ಅಧಿಕಾರಿಗಳು ಧರಣಿ ನಿರತರ ಬೇಡಿಕೆಯನ್ನು ಪರಿಗಣಿಸಿದ್ದಾರೆ. ಗುತ್ತಿಗೆ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ಪ್ರತಿ ತಿಂಗಳ ಮೊದಲ ವಾರದಲ್ಲಿ ನೀಡುವುದು, ನುರಿತ, ಅರೆ ಕೌಶಲ, ಉನ್ನತ ನುರಿತ ಕಾರ್ಮಿಕರಿಗೆ ಸರ್ಕಾರ ನಿಗದಿ ಪಡಿಸಿದ ವೇತನವನ್ನು ನೀಡುವುದು, ಕಾಲಕಾಲಕ್ಕೆ ತುಟ್ಟಿ ಭತ್ಯೆಯನ್ನು ಕಡಿತ ಮಾಡದೇ ಪಾವತಿಸುವುದು, ನಿಗದಿತ ದರದಲ್ಲಿ ಪಿ.ಎಫ್, ಇ.ಎಸ್.ಐ ವಂತಿಗೆಯನ್ನು ಗುತ್ತಿಗೆದಾರರು ಪಾವತಿಸಲು ಒಡಂಬಡಿಕೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.