ಶಿರಸಿ: ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ನ ಉತ್ತರ ಕನ್ನಡ ಜಿಲ್ಲಾ ಘಟಕದ ನಾಲ್ಕನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಇತಿಹಾಸ ತಜ್ಞ ಡಾ. ಎ.ಕೆ.ಶಾಸ್ತ್ರಿ ಆಯ್ಕೆಯಾಗಿದ್ದಾರೆ. ನ.17ರಂದು ಇಲ್ಲಿನ ಮಾರಿಕಾಂಬಾ ಕಲ್ಯಾಣ ಮಂಟಪದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಸಂಘಟನೆ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ತಿಳಿಸಿದ್ದಾರೆ.
ಸಂಶೋಧನಾ ಕೇಂದ್ರದಲ್ಲಿ ರಾಜ್ಯೋತ್ಸವ
ಶಿರಸಿ: ಇಲ್ಲಿನ ತೋಟಗಾರಿಕಾ ಸಂಶೋಧನೆ ಹಾಗೂ ವಿಸ್ತರಣಾ ಕೇಂದ್ರದಲ್ಲಿ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕೇಂದ್ರ ಮುಖ್ಯಸ್ಥ ಪ್ರಶಾಂತ ಎ ಅವರು ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕೇಂದ್ರದ ಅಧೀಕ್ಷಕ ಸುಧೀಶ ಕುಲಕರ್ಣಿ, ಸಿಬ್ಬಂದಿ ಹಾಜರಿದ್ದರು.