<p><strong>ಕಾರವಾರ</strong>: ಕೋವಿಡ್ ಕಾರಣದಿಂದ ಬದಲಾದ ಪದ್ಧತಿಯಲ್ಲಿ ದ್ವಿತೀಯ ಪಿ.ಯು ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ದ್ವಿತೀಯ ಪಿ.ಯು ತರಗತಿಯಲ್ಲಿದ್ದ ಎಲ್ಲರನ್ನೂ ಉತ್ತೀರ್ಣ ಎಂದು ಪರಿಗಣಿಸಲಾಗಿದೆ.</p>.<p>ಉತ್ತರ ಕನ್ನಡದಲ್ಲಿ ಒಟ್ಟು 14,665 ವಿದ್ಯಾರ್ಥಿಗಳು ದ್ವಿತೀಯ ಪಿ.ಯು ಅಧ್ಯಯನ ಮಾಡುತ್ತಿದ್ದರು. ಅವರಲ್ಲಿ 13,467 ಮಂದಿ ಮೊದಲ ಬಾರಿ ಪರೀಕ್ಷೆ ಬರೆಯಲು ನೋಂದಣಿಯಾಗಿದ್ದರು. ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ 11,003, ಗ್ರಾಮೀಣ ಭಾಗದಲ್ಲಿ 3,462 ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 3,838, ವಾಣಿಜ್ಯ ವಿಭಾಗದಲ್ಲಿ 6,626 ಹಾಗೂ ವಿಜ್ಞಾನ ವಿಭಾಗದಲ್ಲಿ 4,001 ವಿದ್ಯಾರ್ಥಿಗಳಿದ್ದರು.</p>.<p>600ಕ್ಕೆ 600 ಅಂಕಗಳನ್ನು ಪಡೆದವರು, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರು, ವಿವಿಧ ದರ್ಜೆಗಳಲ್ಲಿ ಉತ್ತೀರ್ಣರಾದವರು ಹಾಗೂ ಕನಿಷ್ಠ ಉತ್ತೀರ್ಣದ ಅಂಕಗಳನ್ನು ಪಡೆದವರು ಎಷ್ಟು ವಿದ್ಯಾರ್ಥಿಗಳು ಎಂಬ ಬಗ್ಗೆ ತಿಳಿದು ಬರಬೇಕಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎನ್.ಬಗಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ</strong>: ಕೋವಿಡ್ ಕಾರಣದಿಂದ ಬದಲಾದ ಪದ್ಧತಿಯಲ್ಲಿ ದ್ವಿತೀಯ ಪಿ.ಯು ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಇಲಾಖೆ ಮಂಗಳವಾರ ಪ್ರಕಟಿಸಿದೆ. ದ್ವಿತೀಯ ಪಿ.ಯು ತರಗತಿಯಲ್ಲಿದ್ದ ಎಲ್ಲರನ್ನೂ ಉತ್ತೀರ್ಣ ಎಂದು ಪರಿಗಣಿಸಲಾಗಿದೆ.</p>.<p>ಉತ್ತರ ಕನ್ನಡದಲ್ಲಿ ಒಟ್ಟು 14,665 ವಿದ್ಯಾರ್ಥಿಗಳು ದ್ವಿತೀಯ ಪಿ.ಯು ಅಧ್ಯಯನ ಮಾಡುತ್ತಿದ್ದರು. ಅವರಲ್ಲಿ 13,467 ಮಂದಿ ಮೊದಲ ಬಾರಿ ಪರೀಕ್ಷೆ ಬರೆಯಲು ನೋಂದಣಿಯಾಗಿದ್ದರು. ನಗರ ಹಾಗೂ ಪಟ್ಟಣ ಪ್ರದೇಶದಲ್ಲಿ 11,003, ಗ್ರಾಮೀಣ ಭಾಗದಲ್ಲಿ 3,462 ವಿದ್ಯಾರ್ಥಿಗಳು ಈ ಬಾರಿ ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 3,838, ವಾಣಿಜ್ಯ ವಿಭಾಗದಲ್ಲಿ 6,626 ಹಾಗೂ ವಿಜ್ಞಾನ ವಿಭಾಗದಲ್ಲಿ 4,001 ವಿದ್ಯಾರ್ಥಿಗಳಿದ್ದರು.</p>.<p>600ಕ್ಕೆ 600 ಅಂಕಗಳನ್ನು ಪಡೆದವರು, ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದವರು, ವಿವಿಧ ದರ್ಜೆಗಳಲ್ಲಿ ಉತ್ತೀರ್ಣರಾದವರು ಹಾಗೂ ಕನಿಷ್ಠ ಉತ್ತೀರ್ಣದ ಅಂಕಗಳನ್ನು ಪಡೆದವರು ಎಷ್ಟು ವಿದ್ಯಾರ್ಥಿಗಳು ಎಂಬ ಬಗ್ಗೆ ತಿಳಿದು ಬರಬೇಕಿದೆ ಎಂದು ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಸ್.ಎನ್.ಬಗಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>