ಆರ್.ಸಿ.ಎಚ್. ಡಾ.ರಮೇಶ ರಾವ್ ಮಾತನಾಡಿ, ‘ಜಿಲ್ಲೆಯಾದ್ಯಂತ ಲಸಿಕೆ ಪಡೆದುಕೊಳ್ಳಲು ಸಾರ್ವಜನಿಕರು ಉತ್ಸಾಹ ತೋರುತ್ತಿದ್ದಾರೆ. ಆದರೆ, ಭಟ್ಕಳ ಮತ್ತು ಜೊಯಿಡಾ ತಾಲ್ಲೂಕಿನಲ್ಲಿ ಉಳಿದ ತಾಲ್ಲೂಕುಗಳಿಗೆ ಹೋಲಿಸಿದರೆ ಪ್ರಮಾಣ ಕಡಿಮೆಯಿದೆ. ಜೊಯಿಡಾ ತಾಲ್ಲೂಕಿನಲ್ಲಿ ಭೌಗೋಳಿಕ ಕಾರಣದಿಂದಾಗಿ ಅಡಚಣೆಯಾಗಿದೆ. ಉಪ ಕೇಂದ್ರಗಳಲ್ಲೂ ಲಸಿಕೆ ನೀಡಲು ಶುರು ಮಾಡಿದ ಬಳಿಕ ಈ ಸಮಸ್ಯೆ ಬಗೆಹರಿಯಲಿದೆ’ ಎಂದರು.