ಕಳೆದ ವರ್ಷ ಭಾರಿ ಪ್ರಮಾಣದಲ್ಲಿ ಭೂಕುಸಿತವಾಗಿ ಸುಮಾರು ಒಂದು ತಿಂಗಳು ಈ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಈ ವರ್ಷ ಜುಲೈ 11ರಂದು ಅಣಶಿಯ ಎರಡು ಕಡೆಗಳಲ್ಲಿ ಮಣ್ಣು ರಸ್ತೆಗೆ ಜಾರಿತ್ತು. ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿರುವ ಕಾರಣ ಭೂಕುಸಿತ ಮತ್ತೂ ಮುಂದುವರಿಯುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಆದ್ದರಿಂದ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.