ಜೂನ್ 25ರಿಂದ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆಗೊಳಿಸುವಂತೆ ಶಿಕ್ಷಣ ಇಲಾಖೆ, ಸಾರಿಗೆ ಸಂಸ್ಥೆಯನ್ನು ವಿನಂತಿಸಿತ್ತು. ಆದರೆ, ಸೋಮವಾರ ಯಲ್ಲಾಪುರ ಡಿಪೊ ವ್ಯಾಪ್ತಿಯ ಒಬ್ಬರು ನಿರ್ವಾಹಕರಿಗೆ ಕೋವಿಡ್ 19 ಕಾಯಿಲೆ ದೃಢಪಟ್ಟಿದೆ. ಹೀಗಾಗಿ, ಯಲ್ಲಾಪುರ ತಾಲ್ಲೂಕಿನಲ್ಲಿ ಪರೀಕ್ಷೆಗೆ ಬಳಸುವ ಬಸ್ಗಳಿಗೆ ಅಂಕೋಲಾ ಘಟಕದ ಬಸ್ ನಿರ್ವಾಹಕರು, ಚಾಲಕರು, ಮುಂಡಗೋಡ ತಾಲ್ಲೂಕಿನಲ್ಲಿ ಶಿರಸಿ ಘಟಕದ ಚಾಲಕ, ನಿರ್ವಾಹಕರನ್ನು ಬಳಸಿಕೊಳ್ಳಲಾಗುವುದು. ಬಸ್ಗಳು ಯಾವುದೇ ಕಾರಣಕ್ಕೂ ಬಸ್ ನಿಲ್ದಾಣ ಪ್ರವೇಶಿಸುವುದಿಲ್ಲ. ಪಿಕ್ಅಪ್ ಸ್ಥಳದಿಂದ ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ ಎಂದು ವಿವೇಕ ಹೆಗಡೆ ತಿಳಿಸಿದ್ದಾರೆ.