‘ತಾಲ್ಲೂಕಿನಲ್ಲಿ ಈಗ ಒಂದು ಮಾತ್ರ ‘108’ ಕಾರ್ಯ ನಿರ್ವಹಿಸುತ್ತಿದೆ. ಈಗಿರುವ ವಾಹನ ರೋಗಿಯನ್ನು ತುರ್ತು ಸಂದರ್ಭದಲ್ಲಿ ಕುಂದಾಪುರಕ್ಕೆ ಅಥವಾ ಬೇರೆ ಆಸ್ಪತ್ರೆಗಳಿಗೆ ತೆದೆದುಕೊಂಡು ಹೋದರೆ, ಇಲ್ಲಿ ಬದಲಿ ವಾಹನವಿಲ್ಲ. ಅಗತ್ಯವಿದ್ದರೆ ಜನ ಹಣ ಕೊಟ್ಟು ಖಾಸಗಿ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ದಾಖಲಾಗಬೇಕಾದ ಅನಿವಾರ್ಯತೆ ಇದೆ’ ಎನ್ನುತ್ತಾರೆ ಮುರುಡೇಶ್ವರ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸಂತೋಷ ನಾಯ್ಕ.