ಅನುಮಾನಾಸ್ಪದ ನಡೆ: ‘ಕೈಗಾ ಐದು ಮತ್ತು ಆರನೇ ಘಟಕಗಳ ನಿರ್ಮಾಣದ ವಿಚಾರದಲ್ಲಿ ಶಾಸಕಿ ರೂಪಾಲಿಇದುವರೆಗೂ ತಮ್ಮ ನಿಲುವನ್ನು ವ್ಯಕ್ತಪಡಿಸಿಲ್ಲ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಹೋರಾಟದಲ್ಲಿ ಭಾಗಿಯಾಗಿದ್ದಾರೆ. ಆದರೆ, ಶಾಸಕಿ ಮಾತ್ರ ಜಾಣ ಮೌನ ವಹಿಸಿದ್ದಾರೆ. ಮಲ್ಲಾಪುರದಲ್ಲಿ ನಡೆದ ಪ್ರತಿಭಟನಾ ಸಮಾವೇಶಕ್ಕೂ ಅವರು ಗೈರು ಹಾಜರಾದರು. ಕೈಗಾ ಹೊಸ ಘಟಕಗಳ ನಿರ್ಮಾಣದ ವಿಚಾರದಲ್ಲಿ ಅವರು ಉತ್ತರಿಸಲೇಬೇಕು’ ಎಂದು ಆನಂದ್ ಅಸ್ನೋಟಿಕರ್ ಒತ್ತಾಯಿಸಿದರು.