‘ಕುಮಾರಸ್ವಾಮಿಗೆ ನೈತಿಕ ಹಕ್ಕಿಲ್ಲ’: ಮೈತ್ರಿ ಅಭ್ಯರ್ಥಿ ಆನಂದ ಅಸ್ನೋಟಿಕರ್ ಏ.4ರಂದು ನಾಮಪತ್ರ ಸಲ್ಲಿಸುವಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಜತೆಗಿರಲಿದ್ದಾರೆ ಎಂದು ಪತ್ರಕರ್ತರು ಗಮನ ಸೆಳೆದರು.ಅದಕ್ಕೆ ಪ್ರತಿಕ್ರಿಯಿಸಿದಹೆಗಡೆ,‘ಮುಖ್ಯಮಂತ್ರಿಯಾದರೆ ಪ್ರಮಾಣ ವಚನ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಗೆ ಬರುತ್ತೇನೆ, ಅರಣ್ಯಅತಿಕ್ರಮಣಕಾರರ ಸಮಸ್ಯೆಯನ್ನು ಬಗೆಹರಿಸುವುದಾಗಿ ಕುಮಾರಸ್ವಾಮಿ ಹೇಳಿದ್ದರು. ಆದರೆ, ಈವರೆಗೂ ಬರಲಿಲ್ಲ. ರೈತರ ಸಾಲಮನ್ನಾಮಾಡುತ್ತೇವೆ ಎಂದು ಘೋಷಿಸಿದ್ದರು. ಆದರೆ, ಯಾರದ್ದೂ ಮನ್ನಾ ಆಗಿಲ್ಲ. ಬದಲಾಗಿ,ಸಾಲ ಬಾಕಿ ಇರುವರೈತರಿಗೆ ಸೊಸೈಟಿಗಳಿಂದನೊಟೀಸ್ ಜಾರಿ ಮಾಡಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.