ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಕೋಲಾ: ತೋಟದಲ್ಲಿ ಕೊಯ್ದಿಟ್ಟ ಅಡಿಕೆಗೊನೆ ಕಳವು

Last Updated 30 ನವೆಂಬರ್ 2021, 3:12 IST
ಅಕ್ಷರ ಗಾತ್ರ

ಅಂಕೋಲಾ: ತೋಟದಲ್ಲಿ ಕೊಯ್ದಿಟ್ಟ ಅಡಿಕೆ ಗೊನೆಗಳನ್ನು ಕಳ್ಳರು ಕದ್ದೊಯ್ದ ಘಟನೆ ತಾಲ್ಲೂಕಿನ ಕೊಡ್ಲಗದ್ದೆಯಲ್ಲಿ ನಡೆದಿದೆ.

ಇಲ್ಲಿನ ರಾಮಕೃಷ್ಣ ವಿಶ್ವೇಶ್ವರ ಹೆಗಡೆ ಅವರ ಅಡಿಕೆ ತೋಟದಲ್ಲಿ ಗೊನೆಗಳನ್ನು ಕೊಯ್ದು ಒಣಗಿಸಲು ಇಟ್ಟಿದ್ದರು. ಸುಮಾರು ₹ 35000 ಮೌಲ್ಯದ 10 ಚೀಲ ಅಡಿಕೆಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಈ ಕುರಿತು ಭಾನುವಾರ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸೋಮವಾರ ಎಸ್ಐ ಪ್ರೇಮನ ಗೌಡ ಪಾಟೀಲ್ ನೇತೃತ್ವದಲ್ಲಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಕಾರವಾರದಿಂದ ತನಿಖೆಗೆ ಪೂರಕವಾಗಿ ಶ್ವಾನದಳ ಕರೆ ತರಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT