<p><strong>ಅಂಕೋಲಾ</strong>: ಸರ್ಕಾರಿ ಸೇವೆಯಲ್ಲಿರುವವರಿಗೆ ತಮ್ಮ ಕರ್ತವ್ಯದ ಅರಿವಿರಬೇಕು. ಸಮಯ ಪರಿಪಾಲನೆ, ನಿರ್ವಹಿಸಬೇಕಾದ ಕೆಲಸಗಳ ಜವಾಬ್ದಾರಿ ಇದ್ದಾಗ ಮಾತ್ರ ಸರ್ಕಾರಿ ಕಚೇರಿಯಲ್ಲಿ ಕೆಲಸಗಳು ಸುಗಮವಾಗಿ ಸಾಗುತ್ತವೆ ಎಂದು ಜೆಎಂಎಫ್ಸಿ ಹಿರಿಯ ನ್ಯಾಯಾಧೀಶ ದಿನೇಶ ಬಿ.ಜೆ. ಹೇಳಿದರು.</p>.<p>ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಸೋಮವಾರ ತಾಲ್ಲೂಕು ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇಲ್ಲಿನ ವಕೀಲರ ಸಂಘ ಸೌಹಾರ್ದತೆಯಿಂದ ಕಾರ್ಯನಿರ್ವಹಿಸುತ್ತಿದೆ. ನ್ಯಾಯಾಲಯದ ನೌಕರರು ಸಮಯಪ್ರಜ್ಞೆ ಕರ್ತವ್ಯ ಬದ್ಧತೆ ಹೊಂದಿದ್ದಾರೆ ಎಂದರು. ಕಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ ಮಾತನಾಡಿದರು.</p>.<p>ಇಬ್ಬರು ನ್ಯಾಯಾಧೀಶರು ವರ್ಗಾವಣೆಗೊಂಡ ಹಿನ್ನೆಲೆ ವಕೀಲರ ಸಂಘದಿಂದ ಸನ್ಮಾನಿಸಲಾಯಿತು.</p>.<p>ಹಿರಿಯ ವಕೀಲರಾದ ಶಾಂತಾ ಹೆಗಡೆ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಬಿಟಿ ನಾಯ್ಕ, ಸರ್ಕಾರಿ ಅಭಿಯೋಜಕ ಗಿರೀಶ ಪಟಗಾರ ಇದ್ದರು. ಪ್ರತಿಭಾ ನಾಯ್ಕ ನಿರೂಪಿಸಿದರು. ವಿ. ಎಸ್ ನಾಯ್ಕ ಸ್ವಾಗತಿಸಿದರು. ವಕೀಲರಾದ ಎಂ.ಪಿ. ಭಟ್, ವಿ.ಎಸ್ ನಾಯಕ, ಉಮೇಶ ನಾಯ್ಕ, ಬಿ.ಡಿ. ನಾಯ್ಕ, ಸುರೇಶ ಬಾನಾವಳಿಕರ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಂಕೋಲಾ</strong>: ಸರ್ಕಾರಿ ಸೇವೆಯಲ್ಲಿರುವವರಿಗೆ ತಮ್ಮ ಕರ್ತವ್ಯದ ಅರಿವಿರಬೇಕು. ಸಮಯ ಪರಿಪಾಲನೆ, ನಿರ್ವಹಿಸಬೇಕಾದ ಕೆಲಸಗಳ ಜವಾಬ್ದಾರಿ ಇದ್ದಾಗ ಮಾತ್ರ ಸರ್ಕಾರಿ ಕಚೇರಿಯಲ್ಲಿ ಕೆಲಸಗಳು ಸುಗಮವಾಗಿ ಸಾಗುತ್ತವೆ ಎಂದು ಜೆಎಂಎಫ್ಸಿ ಹಿರಿಯ ನ್ಯಾಯಾಧೀಶ ದಿನೇಶ ಬಿ.ಜೆ. ಹೇಳಿದರು.</p>.<p>ಪಟ್ಟಣದ ಜೆಎಂಎಫ್ಸಿ ನ್ಯಾಯಾಲಯದ ಆವರಣದಲ್ಲಿ ಸೋಮವಾರ ತಾಲ್ಲೂಕು ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಇಲ್ಲಿನ ವಕೀಲರ ಸಂಘ ಸೌಹಾರ್ದತೆಯಿಂದ ಕಾರ್ಯನಿರ್ವಹಿಸುತ್ತಿದೆ. ನ್ಯಾಯಾಲಯದ ನೌಕರರು ಸಮಯಪ್ರಜ್ಞೆ ಕರ್ತವ್ಯ ಬದ್ಧತೆ ಹೊಂದಿದ್ದಾರೆ ಎಂದರು. ಕಿರಿಯ ಸಿವಿಲ್ ನ್ಯಾಯಾಧೀಶ ರಂಗಸ್ವಾಮಿ ಜೆ ಮಾತನಾಡಿದರು.</p>.<p>ಇಬ್ಬರು ನ್ಯಾಯಾಧೀಶರು ವರ್ಗಾವಣೆಗೊಂಡ ಹಿನ್ನೆಲೆ ವಕೀಲರ ಸಂಘದಿಂದ ಸನ್ಮಾನಿಸಲಾಯಿತು.</p>.<p>ಹಿರಿಯ ವಕೀಲರಾದ ಶಾಂತಾ ಹೆಗಡೆ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಬಿಟಿ ನಾಯ್ಕ, ಸರ್ಕಾರಿ ಅಭಿಯೋಜಕ ಗಿರೀಶ ಪಟಗಾರ ಇದ್ದರು. ಪ್ರತಿಭಾ ನಾಯ್ಕ ನಿರೂಪಿಸಿದರು. ವಿ. ಎಸ್ ನಾಯ್ಕ ಸ್ವಾಗತಿಸಿದರು. ವಕೀಲರಾದ ಎಂ.ಪಿ. ಭಟ್, ವಿ.ಎಸ್ ನಾಯಕ, ಉಮೇಶ ನಾಯ್ಕ, ಬಿ.ಡಿ. ನಾಯ್ಕ, ಸುರೇಶ ಬಾನಾವಳಿಕರ ಅನಿಸಿಕೆ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>