ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತಿನಿಧಿ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Last Updated 11 ಜೂನ್ 2022, 13:27 IST
ಅಕ್ಷರ ಗಾತ್ರ

ಶಿರಸಿ: ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುತ್ತಿರುವ ‘ಅಜ್ಜೀಬಳ ದತ್ತಿನಿಧಿ ಪುರಸ್ಕಾರ’ಕ್ಕೆ ಜಿಲ್ಲೆಯ ಪತ್ರಕರ್ತರಿಂದ ಬರಹಗಳನ್ನು ಆಹ್ವಾನಿಸಿದೆ.

2020 ಹಾಗೂ 2021ನೇ ಸಾಲಿನ ದತ್ತಿನಿಧಿ ಪುರಸ್ಕಾರಕ್ಕೆ ಲೇಖನ, ವರದಿಯನ್ನು ಜಿಲ್ಲೆಯ ಅರ್ಹ ಪತ್ರಕರ್ತರು ಕಳುಹಿಸಬೇಕು. 2020ನೇ ಸಾಲಿಗೆ ಕೋವಿಡ್ ಸಂದರ್ಭದ ವಿಶೇಷ ವರದಿ, ಲೇಖನಗಳನ್ನು ಆಹ್ವಾನಿಸಿದೆ.

2021ನೇ ಸಾಲಿಗೆ ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲೆಯ ಸ್ವಾತಂತ್ರ್ಯ ಚಳವಳಿ, ಹೋರಾಟಗಾರರ ಕುರಿತು ಪ್ರಕಟವಾದ ವಿಶೇಷ ವರದಿಯನ್ನು ಪುರಸ್ಕಾರಕ್ಕಾಗಿ ಆಹ್ವಾನಿಸಿದೆ.

ಪ್ರಕಟಿತ ಲೇಖನದ ಮೂಲ ಪ್ರತಿಯೊಂದಿಗೆ ಮೂರು ಝೆರಾಕ್ಸ್ ಪ್ರತಿ ಸಹಿತ ಜೂನ್‌ 20ರ ಒಳಗೆ ‘ಜಿ.ಸುಬ್ರಾಯ ಭಟ್ ಬಕ್ಕಳ, ಅಧ್ಯಕ್ಷರು ಉತ್ತರ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಜಿಲ್ಲಾ ಪತ್ರಿಕಾ ಭವನ, ಗಣೇಶ ನಗರ ಶಿರಸಿ-581401’ ವಿಳಾಸಕ್ಕೆ ಕಳುಹಿಸಬಹುದು ಎಂದು ಸಂಘದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ, ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜುಲೈ 1ರಂದು ಶಿರಸಿಯ ಜಿಲ್ಲಾ ಪತ್ರಿಕಾಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪುರಸ್ಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT